SHIVAMOGGA LIVE NEWS | 8 DECEMBER 2022
ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ (agumbe ghat) ಲಾರಿ ಟೈರ್ ಸ್ಪೋಟಗೊಂಡಿದೆ. ಹಾಗಾಗಿ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು.
ಘಾಟಿಯ 8ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡಿದೆ. ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು.
ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ಬಸ್ಸುಗಳು (agumbe ghat) ಕೂಡ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ.
(agumbe ghat)
ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ತೀರ್ಥಹಳ್ಳಿ ಕಡೆಯಲ್ಲೂ ದೊಡ್ಡ ಸಂಖ್ಯೆಯ ವಾಹನಗಳು ನಿಂತಿವೆ. ಸೋಮೇಶ್ವರದಲ್ಲಿ ಘಾಟಿಯ ಪ್ರವೇಶದಲ್ಲಿ ಪೊಲೀಸರು ವಾಹನಗಳನ್ನು ತಡೆ ಹಿಡಿದಿದ್ದಾರೆ. ಒಮ್ಮೆಗೆ ಕೆಲವು ವಾಹನಗಳನ್ನು ಘಾಟಿಯ ಮೇಲೆ ಬಿಡಲಾಗುತ್ತಿದೆ.
ಇದನ್ನೂ ಓದಿ – ಭತ್ತ ಒಕ್ಕಲು ವೇಳೆ ಯಂತ್ರಕ್ಕೆ ಸಿಲುಕಿ ರೈತನ ಬಲಗೈ ಕಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200