Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಗ್ರಾಮಸ್ಥರಿಂದ ಹಣಗೆರೆ ಕಟ್ಟೆಗೆ ಬರುವ ಭಕ್ತರ ವಾಹನಗಳ ತಪಾಸಣೆ

ಗ್ರಾಮಸ್ಥರಿಂದ ಹಣಗೆರೆ ಕಟ್ಟೆಗೆ ಬರುವ ಭಕ್ತರ ವಾಹನಗಳ ತಪಾಸಣೆ

20/09/2021 11:44 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟೆಂಬರ್ 2021

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಭಾವೈಕ್ಯತೆಗೆ ಹೆಸರಾಗಿರುವ ಹಣಗೆರೆ ಕಟ್ಟೆ ಧಾರ್ಮಿಕ ಕ್ಷೇತ್ರಕ್ಕೆ ಬರುವ ಭಕ್ತರ ಪ್ರತಿ ವಾಹನವನ್ನು ಸ್ಥಳೀಯರೆ ತಪಾಸಣೆ ಆರಂಭಿಸಿದ್ದಾರೆ. ಕೋಳಿ, ಕುರಿ ಇದ್ದರೆ ವಾಹನವನ್ನು ಪಕ್ಕಕ್ಕೆ ನಿಲ್ಲಿಸಿ, ಭಕ್ತರನ್ನು ಮಾತ್ರ ದೇಗುಲದೊಳಗೆ ಬಿಡಲಾಗುತ್ತಿದೆ. ಇದರಿಂದ ಸ್ಥಳೀಯರು ಮತ್ತು ಭಕ್ತರ ನಡುವರ ಮಾತಿನ ಚಕಮಕಿ ಶುರುವಾಗಿದೆ.

ಹಣಗೆರೆ ಕಟ್ಟೆ ಮತ್ತು ಸುತ್ತಮುತ್ತಲ ಗ್ರಾಮಸ್ಥರು ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ. ಪ್ರತಿ ವಾಹನವನ್ನು ತಡೆದು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಮೊದಲ ದಿನ ತಪಾಸಣೆ ವೇಳೆ ಕೆಲವು ಭಕ್ತರ ಜೊತೆಗೆ ಮಾತಿನ ಚಕಮಕಿಯು ನಡೆದಿದೆ.

ಪ್ರಾಣಿ ಬಲಿಗೆ ಭಾರಿ ವಿರೋಧ

ತೀರ್ಥಹಳ್ಳಿ ತಾಲೂಕು ಹಣಗೆರೆ ಗ್ರಾಮದ ಶ್ರೀ ಚೌಡೇಶ್ವರಿ, ಭೂತರಾಯ ಮತ್ತು ಸೈಯದ್ ಸಾದತ್ ದರ್ಗಾ ಹೆಸರುವಾಸಿ ಧಾರ್ಮಿಕ ಕ್ಷೇತ್ರ. ಹಿಂದೂ – ಮುಸ್ಲಿಂ ಭಾವೈಕ್ಯತೆಯ ಕ್ಷೇತ್ರ. ಇಷ್ಟಾರ್ಥ ಈಡೇರಬೇಕಿದ್ದರೆ ಪ್ರಾಣಿ ಇಲ್ಲಿ ಬಲಿ ಕೊಡಬೇಕು ಎಂಬ ನಂಬಿಕೆ ಇಲ್ಲಿದೆ. ಆದರೆ ಕಳೆದ ವರ್ಷ ತೀರ್ಥಹಳ್ಳಿ ತಹಶೀಲ್ದಾರ್ ಅವರು ಪ್ರಾಣಿ ಬಲಿ ನಿಷೇಧಿಸಿದ್ದರು. ಆದರೂ ಪ್ರಾಣಿ ಬಲಿ ಮುಂದುವರೆದಿತ್ತು. ಹಾಗಾಗಿ ತಹಶೀಲ್ದಾರ್ ಆದೇಶ ಕಡ್ಡಾಯವಾಗಿ ಪಾಲನೆಯಾಗಬೇಕು ಎಂದು ತೀರ್ಮಾನಿಸಿದ ಗ್ರಾಮಸ್ಥರು, ಭಕ್ತರ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ಪ್ರಾಣಿ ಬಲಿ ಕೊಡದಂತೆ ನೋಡಿಕೊಳ್ಳುತ್ತಿದ್ದಾರೆ.

LifeSpring%2BKan%2B02

ನೂರಾರು ಕೋಳಿ, ಕುರಿ ಬಲಿ

ಹಣಗೆರೆಗೆ ಪ್ರತಿದಿನ ಸಾವಿರಾರು ಭಕ್ತರು ಬರುತ್ತಾರೆ. ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆ, ಹೊರ ರಾಜ್ಯದಿಂದಲೂ ಇಲ್ಲಿಗೆ ಭಕ್ತರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸುತ್ತಾರೆ. ಬಹುತೇಕರು ಪ್ರಾಣಿ ಬಲಿ ನೀಡುತ್ತಾರೆ. ಸಾಮಾನ್ಯ ದಿನಗಳಲ್ಲಿ ಇಲ್ಲಿ 300 ರಿಂದ 500 ಕೋಳಿ ಬಲಿ, ಐದರಿಂದ ಆರು ಕುರಿಗಳನ್ನು ಬಲಿ ಕೊಡಲಾಗುತ್ತದೆ. ಭಾನುವಾರ ಸುಮಾರು ಒಂದೂವರೆ ಸಾವಿರದಷ್ಟು ಕೋಳಿ, 15 ರಿಂದ 20 ಕುರಿಗಳನ್ನು ಬಲಿ ಕೊಡಲಾಗುತ್ತಿದೆ.

ನಿಷೇಧವೇಕೆ? ಗ್ರಾಮಸ್ಥರೇಕೆ ತಪಾಸಣೆ ಮಾಡ್ತಿದ್ದಾರೆ?

ಪ್ರಾಣಿ ಬಲಿ ಕೊಟ್ಟವರು ಪಕ್ಕದ ಅರಣ್ಯದಲ್ಲಿ ಅಡುಗೆ ಮಾಡಿ, ಊಟ ಮಾಡಿ ತೆರಳುತ್ತಾರೆ. ಆದರೆ ಕಸ, ಬಟ್ಟೆಗಳನ್ನು ಕಾಡಿಗೆ ಎಸೆದು ಹೋಗುತ್ತಾರೆ. ಇದರಿಂದ ಹಣಗೆರೆ ಸುತ್ತಮುತ್ತಲ ವಾತಾವರಣ ಮಲಿನಗೊಂಡಿದೆ. ದುರ್ವಾಸನೆ ಬರಲು ಆರಂಭವಾಗಿದೆ. ಹಣಗೆರೆ, ಕೆರೆಹಳ್ಳಿ ಸುತ್ತಮುತ್ತಲ ಗ್ರಾಮಸ್ಥರಲ್ಲಿ ರೋಗದ ಭೀತಿ ಎದುರಾಗಿದೆ. ಅಲ್ಲದೆ ವನ್ಯಜೀವಿಗಳಿಗೂ ಇದು ಕಂಟವಾಗಿದೆ. ಹೀಗಾಗಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಈ ಆದೇಶ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲು ಗ್ರಾಮಸ್ಥರೆ ಫೀಲ್ಡಿಗಿಳಿದಿದ್ದಾರೆ.

han%2B2

ಹೇಗೆ ತಪಾಸಣೆ ಮಾಡುತ್ತಿದ್ದಾರೆ ಗ್ರಾಮಸ್ಥರು?

ಹಣಗೆರೆಗೆ ರಸ್ತೆಯಲ್ಲಿ ಗ್ರಾಮಸ್ಥರು ತಪಾಸಣೆ ಆರಂಭಿಸಿದ್ದಾರೆ. ಪ್ರತಿ ವಾಹನವನ್ನು ತಡೆದು ಪರಿಶೀಲಿಸುತ್ತಿದ್ದಾರೆ. ವಾಹನದಲ್ಲಿ ಅಡುಗೆ ವಸ್ತುಗಳು, ಕೋಳಿ, ಕುರಿ ಇದ್ದರೆ ಅವುಗಳನ್ನು ವಶಕ್ಕೆ ಪಡೆದು, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಬಿಡುತ್ತಿದ್ದಾರೆ. ದೇಗುಲಕ್ಕೆ ತೆರಳಿ ಹಿಂತಿರುಗಿದ ಬಳಿಕ ಕೋಳಿ, ಕುರಿ, ಅಡುಗೆ ವಸ್ತುಗಳನ್ನು ಕೊಟ್ಟು ಕಳುಹಿಸುತ್ತಿದ್ದಾರೆ. ಅರಣ್ಯ ವ್ಯಾಪ್ತಿಯಲ್ಲಿ ಅಡುಗೆ ಮಾಡುವುಕ್ಕೆ ಬಿಡದೆ ಹಿಂದಕ್ಕೆ ಕಳುಹಿಸಲಾಗುತ್ತಿದೆ.

ಗ್ರಾಮಸ್ಥರ ತಪಾಸಣೆ ವೇಳೆ ಕೆಲವರು ಸ್ಥಳೀಯರೊಂದಿಗೆ ಮಾತಿನ ಚಕಮಕಿ ನಡೆಸಿದರು. ಆದರೆ ಇದ್ಯಾವುದಕ್ಕೂ ಬಗ್ಗದ ಸ್ಥಳೀಯರು ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲು ಮಾತ್ರ ಅವಕಾಶ ನೀಡಿದರು. ಗ್ರಾಮಸ್ಥರು ತಪಾಸಣೆ ಆರಂಭಿಸುತ್ತಿದ್ದಂತೆ ಮಾಳೂರು ಠಾಣೆ ಪೊಲೀಸರು ಕೂಡ ಸ್ಥಳಕ್ಕೆ ನೀಡಿ ಪರಿಶೀಲಿಸಿದರು. ಜಗಳಕ್ಕಿಳಿಯುತ್ತಿದ್ದ ಪ್ರವಾಸಿಗರು, ಭಕ್ತರಿಗೆ ಎಚ್ಚರಿಕೆ ಕೊಟ್ಟು ಕಳುಹಿಸಿದರು.

ಪ್ರಾಣಿ ಬಲಿ ನಿಷೇಧ, ಅರಣ್ಯ ವ್ಯಾಪ್ತಿಯಲ್ಲಿ ಅಡುಗೆ ಮಾಡುವುದಕ್ಕೆ ಸಂಪೂರ್ಣ ಬ್ರೇಕ್ ಬಿದ್ದರೆ ಹಣಗೆರೆ ಸುತ್ತಮುತ್ತಲ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡಲಿದ್ದಾರೆ.

Hanagere Temple Board 1

han%2B1

han%2B3

ADVT JULY NANJAPPA HOSPITAL HOME LAB TESTING

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 190921 Car Burn In Agumbe 1st Turn BREAKING NEWS | ಆಗುಂಬೆ ಘಾಟಿಯಲ್ಲಿ ಧಗಧಗನೆ ಹೊತ್ತಿ ಉರಿದ ‘ಸಕೆಂಡ್ ಹ್ಯಾಂಡ್’ ಕಾರು
Next Article SHIVAMOGGA-CITY-TALUK-NEWS- ದ್ವಿತೀಯ ಪಿಯುಸಿ ಫಲಿತಾಂಶ, ಶಿವಮೊಗ್ಗ ಜಿಲ್ಲೆಯ ಶೇ.28ರಷ್ಟು ಅಭ್ಯರ್ಥಿಗಳು ಪಾಸ್, ಪರೀಕ್ಷೆ ಎದುರಿಸಿದವರೆಷ್ಟು?

ಇದನ್ನೂ ಓದಿ

tree-falls-to-agumbe-road-in-Thirthahalli.
THIRTHAHALLI

ಆಗುಂಬೆ ಘಾಟಿ ಸಮೀಪ ಧರೆಗುರುಳಿದ ಮರ, ಕೆಲಕಾಲ ಹೆದ್ದಾರಿ ಬಂದ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
agumbe-ghat-road-during-rainy-season
HOSANAGARASAGARATHIRTHAHALLI

ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು ಮಳೆಯಾಗ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
AGUMBE-GHAT-THIRTHAHALLI.
THIRTHAHALLI

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/06/2025
Truck-problem-at-Agumbe-Ghat
THIRTHAHALLI

ಆಗುಂಬೆ ಘಾಟಿ ತಿರುವಿನಲ್ಲೇ ಕೆಟ್ಟು ನಿಂತ ಕ್ಯಾಂಟರ್‌, ಟ್ರಾಫಿಕ್‌ ಜಾಮ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
mimicry-artist-Viju-Vanadanappally-no-more
THIRTHAHALLI

ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
Truck-and-pickup-mishap-at-gabadi-in-Thirthahalli-
THIRTHAHALLI

ತೀರ್ಥಹಳ್ಳಿ – ಶಿವಮೊಗ್ಗ ಹೆದ್ದಾರಿಯಲ್ಲಿ ಟಿಪ್ಪರ್‌, ಪಿಕ್‌ಅಪ್‌ ವಾಹನ ಡಿಕ್ಕಿ, ಟಿಪ್ಪರ್‌ ಪಲ್ಟಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?