ತೀರ್ಥಹಳ್ಳಿಯಲ್ಲಿ ಗ್ರಾಮ ಲೆಕ್ಕಿಗಿನ ಮೇಲೆ ಹಿಗ್ಗಾಮುಗ್ಗಾ ಥಳಿಸಿದ ಸಹಾಯಕ, ಕ್ರಮಕ್ಕೆ ಆಗ್ರಹಿಸಿ ದೂರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI | 7 ನವೆಂಬರ್ 2019

ತೀರ್ಥಹಳ್ಳಿ ತಾಲೂಕು ನೆರಳೂರು ಗ್ರಾಮಲೆಕ್ಕಿಗ ಯಶವಂತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಗ್ರಾಮ ಸಹಾಯಕ ಅವಿನಾಶ್ ಅವರನ್ನು ಕೆಲಸದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಶಿವಮೊಗ್ಗ ತಾಲೂಕು ಗ್ರಾಮ ಲೆಕ್ಕಿಗರ ಸಂಘದ ಪ್ರಮುಖರು ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮಲೆಕ್ಕಿಗ ಯಶವಂತ್ ಕಚೇರಿಯ ಕೆಲಸ ನಿರ್ವಹಿಸಲು ಗ್ರಾಮ ಸಹಾಯಕ ಅವಿನಾಶ್‌ಗೆ ಸೂಚಿಸಿದ್ದರು. ಇದೇ ಕಾರಣಕ್ಕೆ ಏಕಾಏಕಿ ಯಶವಂತ್ ಮೇಲೆ ಅವಿನಾಶ್ ಹಲ್ಲೆ ನಡೆಸಿದ್ದಾರೆ.

ಈ ಘಟನೆಗೆ ಕಾರಣರಾದ ಅವಿನಾಶ್ ವಿರುದ್ದ ಕ್ರಮ ಜರುಗಿಸುವಂತೆ ಆಗ್ರಹಿಸಿದರು. ಶಿವಮೊಗ್ಗ ತಾಲೂಕು ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷ ಯೋಗೇಶ್ ನಾಯ್ಕ್, ಗೌರವಾಧ್ಯಕ್ಷ ಹರ್ಷವರ್ಧನ್, ಕಾರ್ಯದರ್ಶಿ ಹಾಲೇಶಪ್ಪ, ಉಪಾಧ್ಯಕ್ಷ ಬಸವರಾಜ್ ಇತರರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment