SHIVAMOGGA LIVE NEWS | 16 JULY 2024
THIRTHAHALLI : ಕುರುವಳ್ಳಿ – ಬಾಳೆಬೈಲು ನಡುವಿನ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ (Bypass) ರಸ್ತೆಯಲ್ಲಿ ತಡೆಗೋಡೆ ಮುರಿದು ಬಿದ್ದಿವೆ. ಇದರಿಂದ ಮತ್ತಷ್ಟು ಮಣ್ಣು ರಸ್ತೆ ಮೇಲೆ ಬಿದ್ದಿದೆ. ಸಂಜೆ ವೇಳೆಗೆ ಸುರಿದ ಗಾಳಿ, ಮಳೆಗೆ ತಡೆಗೋಡೆ ಕುಸಿದು ಬಿದ್ದಿವೆ.
ಸೋಮವಾರ ಧರೆ ಕುಸಿತದಿಂದ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ತೀರ್ಥಹಳ್ಳಿ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿತ್ತು. ತೀರ್ಥಹಳ್ಳಿಯಲ್ಲಿ ಇವತ್ತು ಕೂಡ ಮಳೆ ಮುಂದುವರೆದಿದ್ದು, ತಡೆಗೋಡೆ ಪೂರ್ತಿ ಕುಸಿದಿದೆ. ಹಾಗಾಗಿ ಎತ್ತರದ ಪ್ರದೇಶದಿಂದ ಮಣ್ಣು ಸಂಪೂರ್ಣವಾಗಿ ಬೈಪಾಸ್ ರಸ್ತೆಗೆ ಬಂದು ಬಿದ್ದಿದೆ.
ಧರೆ ಕುಸಿತದ ಹಿನ್ನೆಲೆ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ರಸ್ತೆಗೆ ಉರುಳುವ ಸ್ಥಿತಿಯಲ್ಲಿದ್ದ ಮರವೊಂದನ್ನು ಕಡಿದು ಬಳಿಕ ಇವತ್ತು ಮಧ್ಯಾಹ್ನ ರಸ್ತೆಯ ಒಂದು ಬದಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ತಡೆಗೋಡೆ ಕುಸಿದಿದ್ದರಿಂದ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಇದನ್ನೂ ಓದಿ ⇓
ಅಂಜನಾಪುರ ಜಲಾಶಯ ಭರ್ತಿ, ಕೋಡಿ ಬಿದ್ದ ವಿಷಯ ತಿಳಿದು ರೈತರು ಹರ್ಷ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200