ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 MAY 2023
THIRTHAHALLI : ಕಲ್ಲು ಗಣಿ ಕ್ವಾರೆಯಲ್ಲಿದ್ದ ಹೊಂಡದ ಕೆರೆಯಲ್ಲಿ (Lake) ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತೂರು ಹೋಬಳಿ ಸೇವಾ ಪ್ರತಿನಿಧಿ ಶೃತಿ (31) ಎಂದು ಗುರುತಿಸಲಾಗಿದೆ.

ತೀರ್ಥಹಳ್ಳಿಯ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮೇಶ್ವರ ಮಜರೆ ಗ್ರಾಮದ ಕಲ್ಲು ಗಣಿ ಕ್ವಾರೆಯ ಹೊಂಡದ ಕೆರೆಯಲ್ಲಿ (Lake) ಶೃತಿ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಶೃತಿಯ ಪತಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ – ತೀರ್ಥಹಳ್ಳಿ ಜೋಡಿ ಕೋಲೆ, ಕಾರಣ ಬಾಯಿಬಿಟ್ಟ ಆರೋಪಿ, ಇಡ್ಲಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ, ಆಗಿದ್ದೇನು?
ಎರಡು ಬಾರಿ ಅವಳಿ ಮಕ್ಕಳಿಗೆ ಜನ್ಮ
ಕುರುವಳ್ಳಿ ನಿವಾಸಿ ಶೃತಿ ಪ್ರೇಮ ವಿವಾಹವಾಗಿದ್ದರು. ಎರಡು ಬಾರಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಪತಿ ಅತಿ ಹೆಚ್ಚು ಸಾಲ ಮಾಡಿಕೊಂಡಿದ್ದರು. ಇದರಿಂದ ಶೃತಿ ಮನನೊಂದಿದ್ದರು ಎಂದು ಹೇಳಲಾಗುತ್ತಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು















