THIRTHAHALLI | ರೈತರಿಂದ ಹಣ ವಸೂಲಿ, ಅಡಕೆ ಸಸಿಗಳಿಗೆ ಕೊಡಲಿ, ಅರಣ್ಯ ರಕ್ಷಕನ ಮನೆ ಬಾಗಿಲಲ್ಲೇ ಗ್ರಾಮಸ್ಥರ ಧರಣಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 FEBRUARY 2021

ಅಡಕೆ ಸಸಿಗಳನ್ನು ಕಡಿದ ಅರಣ್ಯ ರಕ್ಷಕನ ಮನೆ ಮುಂದೆಯೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಅತನನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಎರಡು ದಿನ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ಕಿರಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಘಟನೆ? ಎಲ್ಲಿ ಪ್ರತಿಭಟನೆ?

ತೀರ್ಥಹಳ್ಳಿ ತಾಲೂಕು ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವತ್ತಿ ಗ್ರಾಮದ ರೈತ ಪ್ರಭಾಕರ್ ಎಂಬುವವರು ಅಡಕೆ ಸಸಿಗಳನ್ನು ನೆಟ್ಟಿದ್ದರು. ಆ ಜಾಗ ಅರಣ್ಯ ಇಲಾಖೆಗೆ ಸೇರಿದ್ದು ಎಂದು ಅರಣ್ಯ ರಕ್ಷಕ ಸಹದೇವ್ ತಕರಾರು ತೆಗೆದಿದ್ದ. ಎರಡು ಸಾವಿರ ರೂ. ಹಣವನ್ನೂ ವಸೂಲಿ ಮಾಡಿದ್ದ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಬಳಿಕ ಅರಣ್ಯ ರಕ್ಷಕ ಸಹದೇವ್‍ ಸಸಿಗಳನ್ನೂ ಕಡಿದು ಹಾಕಿದ್ದ. ಇದು ಗ್ರಾಮಸ್ಥರನ್ನು ಕೆರಳಿಸಿತ್ತು.

ಅರಣ್ಯ ರಕ್ಷಕನ ಚಳಿ ಬಿಡಿಸಿದ ಗ್ರಾಮಸ್ಥರು

ರೈತರನ್ನು ಬೆದರಿಸಿ, ದುಡ್ಡು ವಸೂಲಿ ಮಾಡಿ, ಸಸಿಗಳನ್ನು ಕಡಿದು ಹಾಕಿದ ಸಹದೇವ್ ವಿರುದ್ಧ ಯಡವತ್ತಿ ಗ್ರಾಮಸ್ಥರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದರು. ಕನ್ನಂಗಿಯಲ್ಲಿರುವ ಸಹದೇವ್ ಮನೆ ಮುಂದೆಯೇ ಧರಣಿ ನಡೆಸಿದರು. ಎರಡು ದಿನ ನಿಂತರವಾಗಿ ಧರಣಿ ನಡೆಸಿದ ರೈತರು ಸಹದೇವ್‍ನನ್ನು ಸೇವೆಯಿಂದ ವಜಾಗೊಳಿಸಬೇಕು, ರೈತನಿಂದ ವಸೂಲಿ ಮಾಡಿದ್ದ ಹಣವನ್ನು ಹಿಂತಿರುಗಿಸಬೇಕು, ಸಸಿ ಕಡಿದು ಹಾಕಿದ್ದಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪಕ್ಷಾತೀತ ಹೋರಾಟಕ್ಕೆ ಜನ ಬೆಂಬಲ

ಯಡವತ್ತಿ ಗ್ರಾಮಸ್ಥರು ಪಕ್ಷಾತೀತವಾಗಿ ಹೋರಾಟ ನಡೆಸಿದರು. ಇದಕ್ಕೆ ಅಕ್ಕಪಕ್ಕದ ಗ್ರಾಮಸ್ಥರು  ಬೆಂಬಲವಾಗಿ ನಿಂತರು. ದೊಡ್ಡ ಸಂಖ್ಯೆಯಲ್ಲಿ ಜನ ಸೇರಿ ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಗುರುವಾರ ಅರಣ್ಯ ರಕ್ಷಕ ಮನೆ ಬಾಗಿಲಲ್ಲೇ ನಡುರಾತ್ರಿವರೆಗೂ ಧರಣಿ ನಡೆಸಿದರು. ಶುಕ್ರವಾರ ಕನ್ನಂಗಿಯ ರಸ್ತೆಯಲ್ಲಿ ರೈತರು ಮೆರವಣಿಗೆ ನಡೆಸಿ, ಅರಣ್ಯ ರಕ್ಷಕನ ಮನೆ ಬಳಿ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಸಹದೇವ್ ನಾಪತ್ತೆಯಾಗಿದ್ದಾರೆ. ಮನೆಗೆ ಬೀಗ ಹಾಕಲಾಗಿದೆ.

ಅಸ್ವಸ್ಥರಾದ ಪ್ರಭಾಕರ್ ಆಸ್ಪತ್ರೆಗೆ

ಫೆಬ್ರವರಿ 11ರಂದು ಅರಣ್ಯ ರಕ್ಷಕ ಸಹದೇವ್ ಸಸಿಗಳನ್ನು ಕಡಿದು ಹಾಕಿದ್ದರಿಂದ ಒತ್ತಡಕ್ಕೊಳಗಾಗಿದ್ದ ರೈತ ಪ್ರಭಾಕರ್, ಪ್ರತಿಭಟನೆ ವೇಳೆ ಅಸ್ವಸ್ಥರಾದರು. ಕನ್ನಂಗಿಯಲ್ಲಿ ಅವರಿಗೆ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಭಾಕರ್ ಅವರು ಚೇತರಿಸಿಕೊಳ್ಳುತ್ತಿದ್ದು, ಇವತ್ತು ಬಿಡುಗಡೆ ಆಗುವ ಸಾಧ್ಯತೆ ಇದೆ.

148777428 1060284511118125 316230702728352197 n.jpg? nc cat=108&ccb=3& nc sid=730e14& nc ohc=QeUIUJ9S5N8AX 9v4mo& nc oc=AQlBtod963x7nQH13nxyrIwRQvw5RzBZ0PjD0bTVoONhZ Te4qbR5EXZXhuFSocAaXbzyflIDhudnNQElU9b29ej& nc ht=scontent.fblr1 4

ಕ್ರಮದ ಭರವಸೆ ನೀಡಿದ ಅರಣ್ಯಾಧಿಕಾರಿಗಳು

ತೀರ್ಥಹಳ್ಳಿ ಎಸಿಎಫ್‍ ಸತೀಶ್ಚಂದ್ರ, ಮಂಡಗದ್ದೆ ವಲಯ ಅರಣ್ಯಾಧಿಕಾರಿ ವಾಗೀಶ್ ಸ್ಥಳಕ್ಕೆ ಭೇಟಿ ನೀಡಿ ರೈತರನ್ನು ಸಮಾಧಾನಪಡಿಸಲು ಯತ್ನಿಸಿದರು. ಬಳಿಕ ಅರಣ್ಯ ರಕ್ಷಕನ ವಿರುದ್ಧ ಕ್ರಮದ ಭರವಸೆ ನೀಡಿದರು. ಅಲ್ಲದೆ ಮುಂದೆ ರೈತರಿಗೆ ಕಿರುಕುಳವಾಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕಮೂರ್ತಿ, ಎಪಿಎಂಸಿ ಅಧ್ಯಕ್ಷ ಸಾಲೇಕೊಪ್ಪ ರಾಮಚಂದ್ರ, ಜಿಲ್ಲಾ ಪಂಚಾಯಿತಿ ಸದಸ್ಯ ಕಾಸರವಳ್ಳಿ ಶ್ರೀನಿವಾಸ್, ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ನಿಗಮದ ನಿರ್ದೇಶಕ ಆರ್.ಮದನ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬೇಗುವಳ್ಳಿ ಕವಿರಾಜ್, ಹೊರಬೈಲು ರಾಮಕೃಷ್ಣ, ಯಡೂರು ಸುರೇಂದ್ರ, ಕನ್ನಂಗಿ, ಯಡವತ್ತಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

148089278 1327336650961085 5109074764000168789 n.jpg? nc cat=104&ccb=3& nc sid=8bfeb9& nc ohc=NR0utAxizkQAX ZsI7m& nc ht=scontent.fixe1 1

149735610 1327336677627749 5762088077759933323 n.jpg? nc cat=101&ccb=3& nc sid=8bfeb9& nc ohc=irTW Rth4AX 8HawZ& nc ht=scontent.fixe1 1

149965053 1327336707627746 1306494337030169828 n.jpg? nc cat=102&ccb=3& nc sid=8bfeb9& nc ohc=y7wov18bniwAX fs655& nc ht=scontent.fixe1 2

144230336 1320496224978461 7510471834830533837 n.jpg? nc cat=105&ccb=2& nc sid=730e14& nc ohc=jsM9AiKZgQ4AX9sUKjy& nc ht=scontent.fixe1 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 13, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment