SHIVAMOGGA LIVE NEWS | 24 APRIL 2024
SHIMOGA : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಅಣ್ಣಾಮಲೈ ಆಗಮಿಸಿದ್ದ ಹೆಲಿಕಾಪ್ಟರ್ ಅನ್ನು ಚುನಾವಣ ಅಧಿಕಾರಿಗಳು ತಪಾಸಣೆ ಮಾಡಿದರು.
ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ ಬಿಜೆಪಿ ಪರವಾಗಿ ಪ್ರಚಾರಕ್ಕೆ ಕೆ.ಅಣ್ಣಾಮಲೈ ಶಿವಮೊಗ್ಗಕ್ಕೆ ಆಗಮಿಸಿದರು. ಹೆಲಿಪ್ಯಾಡ್ನಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವು ಪ್ರಮುಖರು ಹೂಗುಚ್ಛ ನೀಡಿ ಸ್ವಾಗತಿಸಿದರು. ಅಣ್ಣಾಮಲೈ ಅವರು ಹೆಲಿಪ್ಯಾಡ್ನಿಂದ ಭದ್ರಾವತಿಗೆ ತೆರಳಿದರು. ಇಂದು ಸಂಜೆ ಶಿವಮೊಗ್ಗದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಚುನಾವಣ ಅಧಿಕಾರಿಗಳಿಂದ ತಪಾಸಣೆ
ಅಣ್ಣಾಮಲೈ ಆಗಮಿಸಿದ್ದ ಹೆಲಿಕಾಪ್ಟರ್ ಅನ್ನು ಚುನಾವಣ ಅಧಿಕಾರಿಗಳು ತಪಾಸಣೆ ಮಾಡಿದರು. ಫ್ಲೈಯಿಂಗ್ ಸ್ಕ್ವಾಡ್ ತಂಡ ಹೆಲಿಕಾಪ್ಟರ್ ಮತ್ತು ಅಣ್ಣಾಮಲೈ ಅವರ ಬ್ಯಾಗುಗಳನ್ನು ಪರಿಶೀಲಿಸಿದರು.
ಇದನ್ನೂ ಓದಿ – ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ