ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 9 ಜುಲೈ 2021
ತೀರ್ಥಹಳ್ಳಿಯ ಕಮ್ಮರಡಿ ಸಮೀಪ ಕಳೆದ ಎರಡು ದಿನದಿಂದ ಎರಡು ದೇವಸ್ಥಾನದಲ್ಲಿ ಕಳ್ಳರು ಹುಂಡಿ ಒಡೆದು, ಕಾಣಿಕೆ ಹಣ ಕಳವು ಮಾಡಿದ್ದಾರೆ.
ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂಗಾರು ಭೂ ಕೈಲಾಸ ದೇವಸ್ಥಾನದಲ್ಲಿ ಕಳವು ಮಾಡಲಾಗಿದೆ. ಇನ್ನು ನಡಬೂರು ಹುಂಬಾಗಿ ದೇವಸ್ಥಾನದಲ್ಲೂ ಕಳ್ಳರು ಹುಂಡಿ ಒಡೆದು ಕಾಣಿಕೆ ಹಣ ದೋಚಿದ್ದಾರೆ.
ಸ್ಥಳೀಯರು, ದೇವಸ್ಥಾನದ ಆಡಳಿತ ಮಂಡಳಿ ದೇಗುಲಕ್ಕೆ ಬಂದಾಗ ಘಟನೆ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200