SHIVAMOGGA LIVE NEWS | 13 APRIL 2024
SHIMOGA : ತೆಂಗಿನ ತೋಟದಲ್ಲಿ ಎಳನೀರು ಕಳ್ಳತನ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿರುವುದಾಗಿ ಆರೋಪಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ತಾಲೂಕು ಹಸೂಡಿಯ ಗಂಗಾಧರ ಎಂಬುವವರ ತೋಟದಲ್ಲಿ 1800 ರೂ. ಮೌಲ್ಯದ 60 ಎಳನೀರು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಏ.8ರಂದು ಘಟನೆ ಸಂಭವಿಸಿದೆ. ಟಾಟಾ ಏಸ್ ವಾಹನದಲ್ಲಿ ತುಂಬಿಕೊಂಡು ಮಾರುಕಟ್ಟೆಗೆ ತಂದು ಮಾರಾಟ ಮಾಡಲಾಗಿದೆ. ಈ ಸಂಬಂಧ ನಾಲ್ವರ ವಿರುದ್ಧ ತೋಟದ ಮಾಲೀಕ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗಿನ ಜಾವ ಪೊಲೀಸರ ದಾಳಿ, ಮನೆಗಳಲ್ಲಿ ಶೋಧ, ಕಾರಣವೇನು? ಎಲ್ಲೆಲ್ಲಿ ನಡೆಯಿತು ದಾಳಿ?