ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 28 ಸೆಪ್ಟೆಂಬರ್ 2021
ಮಹಾಲಯ ಅಮಾವಾಸ್ಯೆ ಪೂಜೆಗೆ ತೆರಳಿದ್ದ ಸಂದರ್ಭ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಹಣಗೆರೆ ಸಮೀಪ ಘಟನೆ ಸಂಭವಿಸಿದೆ. ಬೇಸೂರು ಶ್ರೀನಿವಾಸ್ ಅವರ ಮನೆಯಲ್ಲಿ ಕಳ್ಳತನವಾಗಿದೆ.
ಇಂಟರ್ ಲಾಕ್ ಮುರಿದ ಖದೀಮರು
ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು, ಬಾಗಿಲಿನ ಇಂಟರ್ ಲಾಕ್ ಮೀಟಿ ಒಳಗೆ ನುಗ್ಗಿದ್ದಾರೆ. ರೂಮಿನ ಬೀರುವಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿಸಿದ್ದಾರೆ.
ಮಹಾಲಯ ಅಮಾವಾಸ್ಯೆ ಪೂಜೆ
ಶ್ರೀನಿವಾಸ್ ಅವರು ತಮ್ಮ ಪತ್ನಿ, ಮಗ, ಸೊಸೆ ಜೊತೆಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳಿದ್ದರು. ಅಲ್ಲಿ ಮಹಾಲಯ ಅಮಾವಾಸ್ಯೆ ಪೂಜೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಳ್ಳತನವಾಗಿದೆ.
ಶ್ವಾನದಳ, ಬೆರಳಚ್ಚು ತಜ್ಞರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳ್ಳತ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಮಾಳೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200