SHIVAMOGGA LIVE NEWS | DACOITY | 08 ಮೇ 2022
ಮಟ ಮಟ ಮಧ್ಯಾಹ್ನ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಹಣ ಕಿತ್ತುಕೊಂಡು ಹೋಗಿರುವ ಸಂಬಂಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ಘಟನೆ ಸಂಭವಿಸಿದೆ. ಕಾರ್ ಡೀಲರ್ ಸದ್ದಾಂ ಹುಸೇನ್ ಅವರು ಕೆಲಸ ಮುಗಿಸಿ ಮಧ್ಯಾಹ್ನ ಮನೆಗೆ ತೆರಳುತ್ತಿದ್ದರು. ಈ ವೇಳೆ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಅಡ್ಡಗಟ್ಟಿದ್ದಾರೆ.
ಬೈಕಿನ ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಕೆಳಗಿಳಿದು ಬಂದು ಸದ್ದಾ ಹುಸೇನ್ ಅವರನ್ನು ಅಡ್ಡಗಟ್ಟಿದ್ದಾನೆ. ಚಾಕು ತೋರಿಸಿ ಜೇಬಿನಲ್ಲಿರುವ ಹಣ ಕೊಡುವಂತೆ ಬೆದರಿಸಿದ್ದಾನೆ. ಸದ್ದಾಂ ಹುಸೇನ್ ಅವರು ತಮ್ಮ ಜೇಬಿನಲ್ಲಿದ್ದ 8 ಸಾವಿರ ರೂ. ಹಣವನ್ನು ತೆಗೆದು ಕೊಟ್ಟಿದ್ದಾರೆ.
ಬೈಕಿನಲ್ಲಿದ್ದ ಓರ್ವ ಆರೋಪಿಯ ಗುರುತು ಪತ್ತೆಯಾಗಿದ್ದು, ಸಯ್ಯದ್ ಖುರೇಷಿ ಎಂದು ಗುರುತಿಸಲಾಗಿದೆ. ಚಾಕು ತೋರಿಸಿ ಬೆದರಿಸಿ, ಹಣ ಕಿತ್ತುಕೊಂಡು ಹೋದ ಸಯ್ಯದ್ ಖುರೇಷಿ ಮತ್ತು ಇನ್ನೊಬ್ಬನ ವಿರುದ್ಧ ಸದ್ದಾಂ ಹುಸೇನ್ ದೂರು ನೀಡಿದ್ದಾರೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ – ಸೂಳೆಬೈಲ್ ಮುಖ್ಯರಸ್ತೆಯಲ್ಲಿ ಗೃಹ ಸಚಿವರಿಂದ ವಾರ್ನಿಂಗ್, ಏನಂದರು ಹೋಂ ಮಿನಿಸ್ಟರ್?