ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 APRIL 2021
ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಕಳ್ಳತನದ ಯತ್ನ ನಡೆದಿದೆ. ಹುಂಡಿ ಒಡೆದು ಹಣ ದೋಚಲು ಕಳ್ಳಲು ಯತ್ನಿಸಿದ್ದಾರೆ.
ದೇವಸ್ಥಾನದ ಮುಖ್ಯ ದ್ವಾರದ ಬೀಗ ಒಡೆದು, ಕಳ್ಳರು ಹುಂಡಿಯನ್ನು ಕದ್ದೊಯ್ದಿದ್ದಾರೆ. ದೇಗುಲದ ಹಿಂಭಾಗ ನಿರ್ಜನ ಪ್ರದೇಶದಲ್ಲಿ ಹುಂಡಿಯ ಬೀಗ ಒಡೆಯಲು ಯತ್ನಿಸಿದ್ದಾರೆ. ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಬಂದಾಗ ಕಳ್ಳರು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರು ಕಳ್ಳರು ಈ ಕೃತ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]