ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 10 ಜುಲೈ 2019
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಸರ್ಕಾರದ ಯೋಜನೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಬಂದ್ ಮಾಡಲಾಯಿತು. ಜನರು ಸ್ವಯಂ ಪ್ರೇರಿತವಾಗಿ ಬಂದ್’ಗೆ ಬಂಬಲ ಘೋಷಿಸಿದ್ದರು.
ಬಂದ್ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ವರ್ತಕರು ಅಂಗಡಿ ಮುಂಗಟ್ಟು ಬಂದ್ ಮಾಡಿದ್ದರು. ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆಯಾಗಿತ್ತು. ಬ್ಯಾಂಕು, ಚಿತ್ರಮಂದಿರಗಳು ಕೂಡ ಬಂದ್ ಆಗಿದ್ದವು. ಆದರೆ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದವು.
ಇನ್ನು, ಶಿವಮೊಗ್ಗ – ಉಡುಪಿ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸುತ್ತಿದ್ದ ಖಾಸಗಿ ಸೇವೆಯನ್ನು ಮಧ್ಯಾಹ್ನದವರೆಗೆ ಸ್ಥಗಿತಗೊಳಿಸಲಾಗಿತ್ತು. ತೀರ್ಥಹಳ್ಳಿ ಪಟ್ಟಣದಲ್ಲಿ ವಾಹನ ಸಂಚಾರವಿರಲ್ಲದೆ ಬಣಗುಡುತ್ತಿತ್ತು.
ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಸರ್ಕಾರದ ಯೋಚನೆ ವಿರೋಧಿಸಿ, ತೀರ್ಥಹಳ್ಳಿ ಪಟ್ಟಣದಲ್ಲಿ 25ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ತಾಲೂಕು ಕಚೇರಿಗೆ ಬಂದು ಮನವಿ ಸಲ್ಲಿಸಿದರು.
ಪರಿಸರವಾದಿ ಕಲ್ಕುಳಿ ವಿಠಲ ಹೆಗಡೆ, ಜೆ.ಕೆ.ರಮೇಶ್ ಸೇರಿಂದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]