ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 1 APRIL 2021
ತೀರ್ಥಹಳ್ಳಿ ತಾಲೂಕು ಮಾಳೂರು ಕ್ರಾಸ್ನಲ್ಲಿ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕಿಡಾಗಿದೆ.
ಚಾಲಕ ಅಶೋಕ್, ಪ್ರಯಾಣಿಕರಾದ ವನಿತಾ, ಹಾಲಮ್ಮ, ರಂಗನಾಥ್ ಗಾಯಗೊಂಡಿದ್ದಾರೆ. ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸಿನಲ್ಲಿ ಒಂಭತ್ತು ಪ್ರಯಾಣಿಕರಿದ್ದರು.
ದಟ್ಟ ಮಂಜಿನಿಂದಾಗಿ ಮಾಳೂರು ಕ್ರಾಸ್ನಲ್ಲಿ ಚಾಲಕನಿಗೆ ತಿರುವು ಗೊತ್ತಾಗಲಿಲ್ಲ. ಇದರಿಂದ ಅಪಘಾತ ಸಂಭವಿಸಿದೆ. ಬಸ್ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.