ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 SEPTEMBER 2023
SHIMOGA : ಗಾಂಧಿ ಬಜಾರ್ ಪ್ರವೇಶ ದ್ವಾರದಲ್ಲಿ ಉಗ್ರ ನರಸಿಂಹನ (Ugra Narasimha) ಅವತಾರದ ಪ್ರತಿಮೆ ಕಣ್ತುಂಬಿಕೊಳ್ಳಲು ಕಳೆದ ರಾತ್ರಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಸಾವಿರಾರು ಜನರು ತಡರಾತ್ರಿವರೆಗು ಶಿವಪ್ಪನಾಯಕ ಪ್ರತಿಮೆ ಮುಂಭಾಗ ನಿಂತಿದ್ದು ಉಗ್ರ ನರಸಿಂಹ ಕಲಾಕೃತಿಯನ್ನು ವೀಕ್ಷಿಸಿದರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್
ನಡುರಾತ್ರಿವರೆಗು ಜನರು ಕುಟುಂಬ ಸಹಿತ ಗಾಂಧಿ ಬಜಾರ್ವರೆಗೆ ಬಂದಿದ್ದರು. ಸಾವಿರಾರು ಮಂದಿ ಮಹಾದ್ವಾರದ ಮುಂದೆ ನಿಂತು ಉಗ್ರ ನರಸಿಂಹ ಅವತಾರವನ್ನು ಕಣ್ತುಂಬಿಕೊಂಡರು. ಫೋಟೊ ತೆಗೆಸಿಕೊಂಡು, ಸೆಲ್ಫಿ ಕ್ಲಿಕ್ಕಿಸಿಕೊಂಡು ಜನರು ಖುಷಿಪಟ್ಟರು.
ಇದನ್ನೂ ಓದಿ – ಶಿವಮೊಗ್ಗದ ಉಗ್ರ ನರಸಿಂಹ ಫುಲ್ ವೈರಲ್, ಎಲ್ಲರ ಮೊಬೈಲ್ನಲ್ಲೂ ಉಗ್ರಂ ವೀರಂ
ದೊಡ್ಡ ಸಂಖ್ಯೆಯ ಜನ ಸೇರಿದ್ದರಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇನ್ನು, ಸುರಕ್ಷತೆ ದೃಷ್ಟಿಯಿಂದ ಪೊಲೀಸರನ್ನು ಕೂಡ ನಿಯೋಜಿಸಲಾಗಿತ್ತು.
ಶಿವಮೊಗ್ಗ ಲೈವ್.ಕಾಂ