SHIMOGA : ಸರ್ಕಾರಿ ವೀಕ್ಷಣಾಲಯದಿಂದ ಮೂರು ಮಕ್ಕಳು ನಾಪತ್ತೆಯಾಗಿದ್ದಾರೆ. ಶೌಚಾಲಯದ ಕಬ್ಬಿಣದ ಕಿಟಕಿಯನ್ನು ಕೊರೆದು ಮಕ್ಕಳು ಪರಾರಿಯಾಗಿದ್ದಾರೆ. ಫೆ.27ರಂದು ರಾತ್ರಿ ಘಟನೆ ಸಂಭವಿಸಿದೆ.
ಶಿವಮೊಗ್ಗ, ಸಾಗರ ಮತ್ತು ಭದ್ರಾವತಿ ತಾಲೂಕಿನ 15 ರಿಂದ 17 ವರ್ಷದ ಮಕ್ಕಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಕ್ಕಳಿಗಾಗಿ ಶಿವಮೊಗ್ಗದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಹಲವು ಕಡೆ ಹುಡುಕಿದ್ದಾರೆ. ಎಲ್ಲಿಯು ಪತ್ತೆಯಾಗದ ಹಿನ್ನೆಲೆ ಸರ್ಕಾರಿ ವೀಕ್ಷಣಾಲಯದ ಪರಿವೀಕ್ಷಣಾಧಿಕಾರಿ ಹಾಗೂ ಅಧೀಕ್ಷಕರು ದೂರು ನೀಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 2 ಟೋಲ್ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ ದರ? ಇಲ್ಲಿದೆ ಲಿಸ್ಟ್