ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021
ತಂಬಾಕು ಮಂಡಳಿಯ ಆವರಣದಲ್ಲಿ ಅತಿಕ್ರಮ ಪ್ರವೇಶ ಮಾಡಿದ ಆರೋಪ ಮೇಲೆ ಖಾಸಗಿ ಕಂಪನಿಯೊಂದರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಶಿವಮೊಗ್ಗದ ಅಬ್ಬಲಗೆರೆ ಸಮೀಪ ಇರುವ ತಂಬಾಕು ಮಂಡಳಿಯ ಆವರಣದಲ್ಲಿ ಖಾಸಗಿ ಕಂಪನಿಯವರು ಅತಿಕ್ರಮ ಪ್ರವೇಶ ಮಾಡಿದ್ದಾರೆ. ಆ ಕಂಪನಿಗೆ ಸೇರಿದ ಸಾಮಗ್ರಿಗಳನ್ನು ತಂಬಾಕು ಮಂಡಳಿಯ ಆವರಣದೊಳಗೆ ಹಾಕಿಕೊಂಡಿದ್ದಾರೆ. ಜೂನ್ 2ರಂದು ಈ ಕಂಪನಿಯವರು ಅತಿಕ್ರಮ ಪ್ರವೇಶ ಮಾಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ತಂಬಾಕು ಮಂಡಳಿ ಪ್ರಾದೇಶಿಕ ವ್ಯವಸ್ಥಾಪಕರು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ತಂಬಾಕು ಮಂಡಳಿಯ ಅಧಿಕಾರಿಯೊಬ್ಬರ ಕುಮ್ಮಕ್ಕಿನಿಂದ ಅತಿಕ್ರಮ ಪ್ರವೇಶವಾಗಿರುವ ಬಗ್ಗೆ ಪ್ರಾದೇಶಿಕ ವ್ಯವಸ್ಥಾಪಕರು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]