ಶಿವಮೊಗ್ಗ ಲೈವ್.ಕಾಂ | 1 ಜನವರಿ 2019
ದಿನೇ ದಿನೇ ಮಲೆನಾಡಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಶರಾವತಿ ಕಣಿವೆ ಅಭಯಾಯರಣ್ಯದ ಮುಪ್ಪಾನೆ ಪ್ರಕೃತಿ ಶಿಬಿರ ಅರಣ್ಯ ವ್ಯಾಪ್ತಿಯಲ್ಲಿ, ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.
ಜಿಲ್ಲಾ ವನ್ಯಜೀವಿ ವಿಭಾಗದ ವತಿಯಿಂದ ಈ ಆದೇಶ ಹೊರಡಿಸಲಾಗಿದೆ. ಮುಪ್ಪಾನೆ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆ, ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಆದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಜ.1ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸದ್ಯದಲ್ಲೇ ಸಿಗಂದೂರು ಭಕ್ತರಿಗೂ ಮಾರ್ಗಸೂಚಿ
ಇನ್ನು, ಸಿಗಂದೂರು ಚೌಡೇಶ್ವರಿ ಸನ್ನಿಧಿಗೆ ತೆರಳುವ ಭಕ್ತರಿಗೆ, ಮಾರ್ಗಸೂಚಿ ಬಿಡುಗಡೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜಿಸಿದೆ. ಸಂಕ್ರಾಂತಿ ಸಂದರ್ಭ, ಸಿಗಂದೂರಿಗೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದೇವಸ್ಥಾನಕ್ಕೆ ತೆರಳುವ ಭಕ್ತರು, ಲಾಂಚ್ ಹತ್ತುವ ಹಸಿರುಮಕ್ಕಿ ಭಾಗದಲ್ಲಿ, ಮಂಗಗಳು ಅಸಹಜವಾಗಿ ಸಾವನ್ನಪ್ಪಿವೆ. ಈ ಭಾಗದಲ್ಲಿ ಪರಿಶೀಲನೆ ನಡೆಸಿದಾಗ ಮಂಗನ ಕಾಯಿಲೆ ಇರುವ ಕುರಿತು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಯೋಜಿಸಲಾಗಿದೆ.
ಭಕ್ತರು ಯಾವುದೇ ಕಾರಣಕ್ಕೂ ಅರಣ್ಯ ಪ್ರದೇಶದ ಒಳಗೆ ತೆರಳದಂತೆ ಸುಚಿಸಲಾಗುತ್ತಿದೆ. ಅಷ್ಟೇ ಅಲ್ಲ, ಶೀಘ್ರವೇ ಪ್ರವಾಸಿಗರಲ್ಲಿ ಮಂಗನ ಕಾಯಿಲೆ ಕುರಿತು ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಲು ತೀರ್ಮಾನಿಸಲಾಗಿದೆ.
- ಕುಂಸಿ ಬಳಿ ಬಸ್, ಬೈಕ್ ಮುಖಾಮುಖಿ ಡಿಕ್ಕಿ, ಶಿವಮೊಗ್ಗದ ಇಬ್ಬರು ಯುವಕರು ಸಾವು
- ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ಕಾರು
- ಶಿವಮೊಗ್ಗ – ತುಮಕೂರು ಹೆದ್ದಾರಿ ಕಾಮಗಾರಿಯ ಗುಂಡಿಯಲ್ಲಿ ಮೃತದೇಹ, ಕಾರೇಹಳ್ಳಿಯಲ್ಲಿ ಟೈರ್ ಗೆ ಬೆಂಕಿ, ಆಕ್ರೋಶ
- ಅಡಕೆ ಧಾರಣೆ | 30 ಜನವರಿ 2023 | ಶಿವಮೊಗ್ಗ ಸೇರಿ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಕೆ ರೇಟ್?
- ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸರ ದಾಳಿ, 557 ದಂಡ, 7 ಎಫ್ಐಆರ್, 182 ಲಘು ಕೇಸ್ ಪ್ರಕರಣ ದಾಖಲು
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494ಈ ಮೇಲ್ | [email protected]