ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JANUARY 2021
ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಇವತ್ತು ಟ್ರಾಕ್ಟರ್ ಪರೇಡ್ ನಡೆಯಿತು. ಶಿವಮೊಗ್ಗದ ಸೈನ್ಸ್ ಮೈದಾನದಿಂದ ಮೆರವಣಿಗೆ ನಡೆಸಲಾಯಿತು.
ಸುಮಾರು 80ಕ್ಕೂ ಹೆಚ್ಚು ಟ್ರಾಕ್ಟರ್ಗಳು ಪರೇಡ್ನಲ್ಲಿ ಇದ್ದವು. ರೈತರು, ರೈತ ಮಹಿಳೆಯರು, ವಿವಿಧ ಪಕ್ಷಗಳು, ಸಂಘಟನೆಯ ಕಾರ್ಯಕರ್ತರು ಪರೇಡ್ನಲ್ಲಿ ಪಾಲ್ಗೊಂಡಿದ್ದರು.
ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರೈತರು ಆಗ್ರಹಿಸಿದರು. ರೈತ ಮುಖಂಡ ಕೆ.ಟಿ.ಗಂಗಾಧರ್, ಪ್ರಗತಿಪರ ಹೋರಾಟಗಾರರಾದ ಶ್ರೀಪಾಲ್, ದಲಿತ ಸಂಘಟನೆ ಮುಖಂಡ ಗುರುಮೂರ್ತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಹಲವರು ನೇತೃತ್ವ ವಹಿಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]