ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 8 JULY 2023
SHIMOGA : ಯಶವಂತಪುರ – ಶಿವಮೊಗ್ಗ ರೈಲಿಗೆ (Train) ಸಿಲುಕಿ ಯುವಕನೊಬ್ಬನ ಕಾಲು ತುಂಡಾಗಿದೆ. ಶಿವಮೊಗ್ಗದ ಮಹಾದೇವಿ ಟಾಕೀಸ್ ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ ಘಟನೆ ಸಂಭವಿಸಿದೆ.
ನಾಗರಾಜ್ ಎಂಬಾತನ ಬಲಗಾಲು ತುಂಡಾಗಿದೆ. ಯಶವಂತಪುರ – ಶಿವಮೊಗ್ಗ ರೈಲಿನಲ್ಲಿ ನಾಗರಾಜ್ ಶಿವಮೊಗ್ಗಕ್ಕೆ ಆಗಮಿಸಿದ್ದ. ಅದೇ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡಿದ್ದಾನೆ. ರೈಲು (Train) ಇಳಿಯುವಾಗ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಜನರು ನಾಗರಾಜನನ್ನು ರಕ್ಷಿಸಿ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ತಾಲೂಕಿನಲ್ಲಿ ಜು.9ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ನಾಗರಾಜ್ ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನವನು ಎಂದು ತಿಳಿದು ಬಂದಿದೆ. ಕಡುರಿನಲ್ಲಿರುವ ಪೊಲೀಸ್ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ.
ಶಿವಮೊಗ್ಗ ಲೈವ್.ಕಾಂ