ಶಿವಮೊಗ್ಗ ಲೈವ್.ಕಾಂ | HOSANAGARA NEWS | 17 MAY 2021
ಚಲಿಸುತ್ತಿದ್ದ ಬೈಕ್ಗಳ ಮೇಲೆ ಮರ ಉರುಳಿ ಬಿದ್ದಿದ್ದು ಮೂವರಿಗೆ ಗಾಯವಾಗಿದೆ. ಹೊಸನಗರದ ಕೊಡಚಾದ್ರಿ ಕಾಲೇಜು ಬಳಿ ಘಟನೆ ಸಂಭವಿಸಿದೆ.
ಭಾರಿ ಗಾಳಿ, ಮಳೆಗೆ ಮರ ಉರುಳಿ ಬಿದ್ದಿದೆ. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ಗಳ ಮೇಲೆ ಮರ ಬಿದ್ದಿದೆ. ಬೈಕ್ ಸವಾರ ಮಾವಿನಕೊಪ್ಪ ಬಡಾವಣೆ ಸಾಧಿಕ್ ಎಂಬಾತ ಗಂಭೀರ ಗಾಯಗೊಂಡಿದ್ದಾನೆ.
ಮತ್ತೊಬ್ಬ ಬೈಕ್ ಪ್ರತೀಕ್, ಪಾದಚಾರಿ ಋತ್ವಿಕ್ ಎಂಬುವವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಮರ ಉರುಳಿದಿದೆ. ಹಾಗಾಗಿ ಶಿವಮೊಗ್ಗ – ಹೊಸನಗರ ನಡುವೆ ಕೆಲಕಾಲ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]