ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 MAY 2021
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಸೇತುವೆಯ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಚಾಲಕ ಮೃತಪಟ್ಟಿದ್ದು, ಕ್ಲೀನರ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ತೀರ್ಥಹಳ್ಳಿ ತಾಲೂಕು ಮೇಗರವಳ್ಳಿಯ ಬಳಿಯ ಅಣ್ಣುವಳಿ ಸೇತುವೆ ಬಳಿಯ ಘಟನೆ ಸಂಭವಿಸಿದೆ. ಮಧ್ಯರಾತ್ರಿ ಅಪಘಾತವಾಗಿದ್ದು, ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಮರಳು ಸಾಗಿಸುತ್ತಿದ್ದ ಲಾರಿ
ಅಪಘಾತಕ್ಕೀಡಾದ ಲಾರಿಯಲ್ಲಿ ಮರಳು ಸಾಗಣೆ ಮಾಡಲಾಗುತ್ತಿತ್ತು. ಕರೋನ ಕರ್ಫ್ಯೂ ಜಾರಿಯಾದಾಗಿನಿಂದ ಈ ಭಾಗದಲ್ಲಿ ನಡುರಾತ್ರಿಯಲ್ಲಿ ಮರಳು ಸಾಗಣೆ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]