SHIVAMOGGA LIVE NEWS | 28 NOVEMBER 2023
ANANDAPURA : ಲಾರಿ ಹರಿದು ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಆನಂದಪುರ ಬಸ್ ನಿಲ್ದಾಣದ ಬಳಿ ಘಟನೆ (Incident) ಸಂಭವಿಸಿದೆ. ಆನಂದಪುರದ ನಿವಾಸಿ ಸದಾಶಿವ ರಾವ್ (60) ಮೃತರು. ಇವರು ಗ್ರಾಮ ಪಂಚಾಯಿತಿಯಲ್ಲಿ ನೀರು ಘಂಟಿಯಾಗಿ ಕೆಲಸ ಮಾಡುತ್ತಿದ್ದರು.
ಬಸ್ ನಿಲ್ದಾಣದ ಪಕ್ಕದಲ್ಲಿರುವ ರೈಲ್ವೆ ಸ್ಟೇಷನ್ಗೆ ಹೋಗುವ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಸದಾಶಿವ ಅವರ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿತ್ತು. ಚಿಕಿತ್ಸೆಗಾಗಿ ಮಣಿಪಾಲ್ದ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ- ಶಿವಮೊಗ್ಗ ಎಂಬ ಹೆಸರು ಬಂದಿದ್ದು ಹೇಗೆ? ಇಲ್ಲಿದೆ ಗೊತ್ತಿರಬೇಕಾದ 2 ಸಂಗತಿ | ನಮ್ಮೂರು ಶಿವಮೊಗ್ಗ