SHIVAMOGGA LIVE NEWS | 14 ಮಾರ್ಚ್ 2022
ಲಾರಿ ಕದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕರಿಬಸಪ್ಪ ಅಲಿಯಾಸ್ ಕರಿಯ (32) ಎಂಬಾತ ಬಂಧಿತ. ಮಾರ್ಚ್ 3ರಂದು ಸಾಗರ ತಾಲೂಕಿನ ದಾಸಕೊಪ್ಪ ಗ್ರಾಮದಲ್ಲಿಲಾರಿ ಕದ್ದು ಪರಾರಿಯಾಗಿದ್ದ.
ಲಾರಿ ಕಳ್ಳತನ ಸಂಬಂಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಾಗರ ಗ್ರಾಮಾಂತರ ಠಾಣೆ ಪೊಲೀಸರು, ಕರಿಬಸಪ್ಪನನ್ನು ಬಂಧಿಸಿದ್ದಾರೆ. 7.50 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.
ಸಾಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200