ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MAY 2021
ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಇದರ ಬೆನ್ನಿಗೆ ತುಂಗಾ ಜಲಾಶಯ ಭರ್ತಿಯಾಗುವ ಸಂಭವವಿದ್ದು, ಯಾವುದೆ ಸಂದರ್ಭದಲ್ಲಿ ನೀರು ಹೊರಬಿಡುವ ಸಾದ್ಯತೆ ಇದೆ ಎಂದು ಕರ್ನಾಟಕ ನೀರಾವರಿ ನಿಗಮ ಮುನ್ನೆಚ್ಚರಿಕೆ ನೀಡಿದೆ.
ಜಲಾಶಯದ ಗರಿಷ್ಠ ಮಟ್ಟ 588.24 ಮೀ. ಆಗಿದ್ದು, ಇವತ್ತು 588.02 ಮೀಟರ್ನಷ್ಟು ನೀರು ಭರ್ತಿಯಾಗಿದೆ. ಮಳೆ ಹೆಚ್ಚಾದರೆ ಜಲಾಶಯದ ಒಳ ಹರಿವು ಹೆಚ್ಚಾಗಬಹುದು. ಹಾಗಾಗಿ ಯಾವುದೆ ಕ್ಷಣದಲ್ಲಿ ಜಲಾಶಯದಿಂದ ಹೊರ ಬೀಡಬೇಕಾಗುತ್ತದೆ.
ನದಿ ಪಾತ್ರದಲ್ಲಿ ಇರುವ ಜನರು ಮುನ್ನೆಚ್ಚರಿಕೆ ವಹಿಸಬೇಕು. ತಗ್ಗು ಪ್ರದೇಶದಲ್ಲಿ ವಾಸಿವವರು ಎತ್ತರದ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ನೀರಾವರಿ ನಿಗಮದ ತುಂಗಾ ಮೇಲ್ದಂಡೆ ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]