ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜನವರಿ 2022
ಶರಾವತಿ ನಗರದ ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡುವ ಮೂಲಕ ಜನರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಯುವಕರನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರ ಪೈಕಿ ದಿಲೀಪ್(21) ಕಾಲೇಜು ವಿದ್ಯಾರ್ಥಿಯಾಗಿದ್ದರೆ, ಅಣ್ಣಾನಗರದ ಉಮೇಶ್ (23) ಕಟ್ಟಡ ಕಾರ್ಮಿಕ.
ಇಬ್ಬರು ಶರಾವತಿನಗರದ ತುಂಗಾ ನಾಲೆ ಭಾಗದಲ್ಲಿ ಲಾಂಗ್, ಮಚ್ಚು ಪ್ರದರ್ಶಿಸುತ್ತಿರುವ ಬಗ್ಗೆ ಮಾಹಿತಿ ಬಂದ ಕೂಡಲೇ ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸರನ್ನು ಕಂಡ ಯುವಕರು ಬೈಕ್ನಲ್ಲಿ ಪರಾರಿಯಾಗಲು ವಿಫಲ ಯತ್ನ ನಡೆಸಿದ್ದರು.