ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021
ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಆಯುಧ, ಬೈಕು ಮತ್ತು ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗದ ತುಂಗಾ ನಗರ ಠಾಣೆ ಪೊಲೀಸರು ಲಷ್ಕರ್ ಮೊಹಲ್ಲಾದ ಮೊಹಮ್ಮದ್ ನಖಿ (23) ಮತ್ತು ಇಲಿಯಾಸ್ ನಗರದ ಮೊಹಮ್ಮದ್ ಅಬು ಸ್ವಲೇಹ (22) ಎಂಬುವವರನ್ನು ಬಂಧಿಸಲಾಗಿದೆ.
ಏನಿದು ಪ್ರಕರಣ?
ಶಿವಮೊಗ್ಗದ ವಾದಿ ಎ ಹುದಾ ಬಡಾವಣೆಯಲ್ಲಿ ಅ.29ರಂದು ರಾತ್ರಿ ಮೊಹಮ್ಮದ್ ಜೈನಾದ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಮನೆಗೆ ತೆರಳುತ್ತಿದ್ದ ವೇಳೆ ಆರೋಪಿಗಳು ದಾಳಿ ನಡೆಸಿ, ಚಾಕುವಿನಿಂದ ಚುಚ್ಚಿ ಜೈನಾದ್’ನ ಹತ್ಯೆಗೈದಿದ್ದರು.
ಪ್ರಕರಣದ ತನಿಖೆ ನಡೆಸಿದ ತುಂಗಾ ನಗರ ಠಾಣೆ ಪೊಲೀಸರು ಹತ್ಯೆಯ ಆರೋಪಿಗಳನ್ನು ಬಂಧಿಸಿದ್ದಾರೆ.