ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 JANUARY 2024
RIPPONPETE : ಗಿಳಿಶಾಸ್ತ್ರ ಹೇಳುತ್ತಿದ್ದ ಇಬ್ಬರನ್ನು ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಪಂಜರದೊಳಗಿದ್ದ ಎರಡು ಗಿಳಿಗಳನ್ನು ವಶಕ್ಕೆ ಪಡೆಯಲಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ರಿಪ್ಪನ್ಪೇಟೆಯ ಕೆರೆಹಳ್ಳಿ ಕ್ರಾಸ್ನಲ್ಲಿ ಬೆಂಗಳೂರಿನ ಮಂಜುನಾಥ್ ಮತ್ತು ಯಲ್ಲಪ್ಪ ಎಂಬುವವರನ್ನು ಬಂಧಿಸಲಾಗಿದೆ. ಗಿಳಿಗಳನ್ನು ಬಳಸಿ ಜ್ಯೋತಿಷ್ಯ ಹೇಳುವ ನೆಪದಲ್ಲಿ ಅವುಗಳನ್ನು ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿ ಇಬ್ಬರನ್ನು ಬಂಧಿಸಲಾಗಿದೆ. ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ರಸ್ತೆಗೆ ಹಾಲು ಚೆಲ್ಲಿ ರೈತರ ಆಕ್ರೋಶ, ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಬಹು ಹೊತ್ತು ಟ್ರಾಫಿಕ್ ಜಾಮ್
ಕಾರ್ಯಾಚರಣೆಯಲ್ಲಿ ಸಾಗರ ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಮೋದಿನಿ, ಗಣೇಶ್, ಗಿರೀಶ್, ವಿಶ್ವನಾಥ, ಕೃಷ್ಣ, ದಿನೇಶ, ಮಹೇಶ್ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ