ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020
ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ತಾಲೂಕು ಅಗರದಹಳ್ಳಿಯ ಶಶಿಕುಮಾರ್ (26) ಮತ್ತು ದೊಡ್ಡೇರಿಯ ರವಿ (29) ಬಂಧಿತರು. ಇವರಿಂದ 2.30 ಲಕ್ಷ ರೂ. ಮೌಲ್ಯದ 56 ಗ್ರಾಂ ಚಿನ್ನಾಭರಣ, 2 ಸಾವಿರ ಮೌಲ್ಯದ ಬೆಳ್ಳಿ ವಸ್ತುಗಳು, ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆ ಸಿಪಿಐ ಮಂಜುನಾಥ್, ಹೊಳೆಹೊನ್ನೂರು ಠಾಣೆ ಪಿಎಸ್ಐ ಸುರೇಶ್, ಭದ್ರಾವತಿ ಗ್ರಾಮಾಂತರ ಠಾಣೆ ಪಿಎಸ್ಐ ದೇವರಾಜ್, ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]