SHIVAMOGGA LIVE NEWS | 3 APRIL 2024
SHIMOGA : ನಗರದ ಕಲ್ಯಾಣ ಮಂಟಪವೊಂದರಲ್ಲಿ ನಡೆಯುತ್ತಿದ್ದ ವಿವಾಹಕ್ಕೆ ವಾದ್ಯ ನುಡಿಸಲು ತೆರೆಳುತ್ತಿದ್ದವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಬುಳ್ಳಾಪುರದಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿ ತಾಲೂಕು ಕುರುವ ಗ್ರಾಮದ ರಮೇಶ್ (19), ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಅಜಯ್ (23) ಮೃತರು.
ಘಟನೆ ಸಂಭವಿಸಿದ್ದು ಹೇಗೆ?
ಶಿವಮೊಗ್ಗದ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ವಾದ್ಯ ನುಡಿಸಲು ರಮೇಶ್, ಅಜಯ್ ಸೇರಿದಂತೆ ಐವರು ಮೂರು ಬೈಕ್ಗಳಲ್ಲಿ ತೆರಳುತ್ತಿದ್ದರು. ಬುಳ್ಳಾಪುರದಲ್ಲಿ ಹಿಂಬದಿಯಿಂದ ಬಂದ ಬೈಕ್ ರಮೇಶ್ ಮತ್ತು ಅಜಯ್ ತೆರಳುತ್ತಿದ್ದ ಬೈಕ್ ಹಿಂದಿಕ್ಕುವ ರಭಸದಲ್ಲಿ ಡಿಕ್ಕಿ ಹೊಡೆದಿದೆ.
ಎರಡು ಬೈಕ್ನಲ್ಲಿದ್ದವರು ಕೆಳಗೆ ಬಿದ್ದಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಾಗ ಅಜಯ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ರಮೇಶ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಂಸತ್ತಿನಲ್ಲಿ ಶಿವಮೊಗ್ಗ ಸಂಸದರು ಕೇಳಿದ ಮೊದಲ ಪ್ರಶ್ನೆ ಏನು? ಸಚಿವರ ಉತ್ತರವೇನಿತ್ತು? ಇಲ್ಲಿದೆ ಡಿಟೇಲ್ಸ್