SHIVAMOGGA LIVE NEWS | 2 ಮಾರ್ಚ್ 2022
ಜೂಜಾಟದಲ್ಲಿ ತೊಡಗಿದ್ದ ಇಬ್ಬರ ವಿರುದ್ಧ ಭದ್ರಾವತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ಭದ್ರಾವತಿ ಹೊಸಮನೆ ಎನ್.ಎಂ.ಸಿ 4ನೇ ಕ್ರಾಸ್ ಕನ್ಸರ್’ವೆನ್ಸಿಯಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಸಂಬಂಧ ಪ್ರದೀಪ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಇನ್ನು, ಭದ್ರಾವತಿ ಕುಪುಂಪು ನಗರದ ಕೆರೆಕೋಡಮ್ಮ ದೇಗುಲದ ಹಿಂಭಾಗದಲ್ಲಿ ಓಸಿ ಮಟ್ಕಾ ಆಡಿಸುತ್ತಿರುವ ಸಂಬಂಧ ಪ್ರಕರಣ ದಾಖಲಾಗಿದೆ. ಕೆಂಚಪ್ಪ ಎಂಬಾತನ ವಿರುದ್ಧ ಕೇಸ್ ದಾಖಲಾಗಿದೆ.
ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.