SHIVAMOGGA LIVE NEWS | DROWN | 12 ಮೇ 2022
ಭದ್ರಾ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಚಂದನಾ (14) ಮತ್ತು ಹರ್ಷ (10) ನಾಪತ್ತೆಯಾಗಿದ್ದಾರೆ. ಹೊಳೆಹೊನ್ನೂರು ಸಮೀಪದ ಅಗರದಹಳ್ಳಿ ಬಳಿ ಭದ್ರಾ ಬಲದಂಡೆ ನಾಲೆಯಲ್ಲಿ ಮಕ್ಕಳು ತಮ್ಮ ದೊಡ್ಡಪ್ಪನೊಂದಿಗೆ ಈಜಲು ತೆರಳಿದ್ದರು. ಈ ಸಂದರ್ಭ ನಾಪತ್ತೆಯಾಗಿದ್ದಾರೆ.
ರಜೆಗೆ ದೊಡ್ಡಪ್ಪನ ಮನೆಗೆ ಬಂದಿದ್ದರು
ಮಕ್ಕಳು ಶಿವಮೊಗ್ಗ ತಾಲೂಕು ಮುದುವಾಲ ಗ್ರಾಮದವರು. ಶಾಲೆಗೆ ರಜೆ ಇದ್ದ ಹಿನ್ನೆಲೆ ಇವರು ಅಗರದಹಳ್ಳಿಯಲ್ಲಿರುವ ದೊಡ್ಡಪ್ಪನ ಮನೆಗೆ ಬಂದಿದ್ದರು. ಬುಧವಾರ ದೊಡ್ಡಪ್ಪನ ಜೊತೆಗೆ ಭದ್ರಾ ನಾಲೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನಾಲೆಯಲ್ಲಿ ನಾಪತ್ತೆಯಾಗಿದ್ದಾರೆ.
ಶೋಧ ಕಾರ್ಯ ಆರಂಭ
ಮಕ್ಕಳು ನಾಪತ್ತೆ ಪ್ರಕರಣ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೋಟ್ ಬಳಸಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಬುಧವಾರ ಮಕ್ಕಳು ಪತ್ತೆಯಾಗಿಲ್ಲ. ಇವತ್ತು ಶೋಧ ಕಾರ್ಯ ಪುನಾರಂಭ ಮಾಡಲಾಗಿದೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಮೆಗ್ಗಾನ್ ಆಸ್ಪತ್ರೆ ಮುಂದೆ ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ, ಕಾರಣವೇನು?