ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜೂನ್ 2020
ಅಮೃತ್ ಯೋಜನೆಯಡಿ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಹತ್ತಿರ ಮಿಳ್ಳಘಟ್ಟಕ್ಕೆ ಹೋಗುವ ರಸ್ತೆಯಲ್ಲಿ ಎಂಎಸ್.ಕೊಳವೆ ಮಾರ್ಗ ಅಳವಡಿಸಿದೆ. ಈಗಿರುವ ಆರ್.ಎಂ.7 ಕೊಳವೆ ಮಾರ್ಗಕ್ಕೆ ಲಿಂಕ್ ಮಾಡಿ ಚಾಲನೆಗೊಳಿಸಬೇಕಾಗಿದೆ. ಆದ್ದರಿಂದ ಜೂನ್ 10 ಮತ್ತು 11 ರಂದು ನಗರದ ವಿವಿಧೆಡೆ ನೀರು ಸರಬರಾಜು ಇರುವುದಿಲ್ಲ.
ಎಲ್ಲೆಲ್ಲಿ ನೀರು ಬರಲ್ಲ?
ಪೊಲೀಸ್ ಕ್ವಾರ್ಟಸ್, ಟಿಪ್ಪುನಗರ, ತುಂಗಾನಗರ, ಜಿಲ್ಲಾ ಪಂಚಾಯತ್ ಕಚೇರಿ ಎದುರು, ಶಿವಮೂರ್ತಿ ಸರ್ಕಲ್, ಬಸವನಗುಡಿ, ರವೀಂದ್ರನಗರ, ಡಿ.ಸಿ.ಕಾಂಪೌಂಡ್, ಶೇಷಾದ್ರಿಪುರಂ ಟ್ಯಾಂಕ್ಗಳಿಂದ ದೈನಂದಿನ ನೀರು ಪೂರೈಕೆಯಾಗುವ ಪ್ರದೇಶಗಳಿಗೆ ನೀರು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ KUWS ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.