ಶಿವಮೊಗ್ಗ ಲೈವ್.ಕಾಂ | BHADRAVATHI | 2 ಅಕ್ಟೋಬರ್ 2019
ಗಾಂಧಿ ಜಯಂತಿಯಂದು ಭದ್ರಾವತಿಯಲ್ಲಿ ಎರಡು ಇಂದಿರಾ ಕ್ಯಾಂಟೀನ್’ಗಳಿಗೆ ಚಾಲನೆ ಸಿಕ್ಕಿದೆ. ಶಾಸಕ ಬಿ.ಕೆ.ಸಂಗಮೇಶ್ವರ ಅವರು ಇವತ್ತು ಇಂದಿರಾ ಕ್ಯಾಂಟೀನ್’ಗಳನ್ನು ಉದ್ಘಾಟನೆ ಮಾಡಿದರು.
ಹೊಸ ಸೇತುವೆ ಸಮೀಪ ಮತ್ತು ಸಂತ ಮೈದಾನದ ಬಳಿಕ ಇಂದಿರಾ ಕ್ಯಾಂಟೀನ್’ಗಳನ್ನು ತೆರೆಯಾಗಲಿದೆ. ಕ್ಯಾಂಟೀನ್ ಉದ್ಘಾಟನೆ ಮಾಡಿದ ಶಾಸಕ ಸಂಗಮೇಶ್ವರ ಅವರು ಜನರಿಗೆ ತಿಂಡಿ ಬಡಿಸಿದರು.
ಬಳಿಕ ಮಾತನಾಡಿದ ಶಾಸಕ ಸಂಗಮೇಶ್ವರ, ಕಡಿಮೆ ದರದಲ್ಲಿ ಗುಣಮಟ್ಟದ ಊಟ ಮತ್ತು ತಿಂಡಿಯನ್ನು ನೀಡಲಾಗುತ್ತದೆ. ಎಲ್ಲ ವರ್ಗದ ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ನಗರಸಭೆ ಆಯುಕ್ತ ಮನೋಹರ್, ಅಧಿಕಾರಿಗಳಾದ ಮಹಮ್ಮದ್ ಅಲಿ, ರುದ್ರೇಗೌಡ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]