ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಹತ್ಯೆ ಪ್ರಕರಣ ಸಂಬಂಧ ಇನ್ನು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಭದ್ರಾವತಿ ಹೊಸಮನೆ ಬಡಾವಣೆಯ ಅಬ್ದುಲ್ ರೋಶನ್ (24), ಶಿವಮೊಗ್ಗದ ವಾದಿ-ಎ-ಹುದಾ ನಿವಾಸಿ ಜಾಫರ್ ಸಾದಿಕ್ ಅಲಿಯಾಸ್ ಬದ್ರುದಿನ್ (55) ಎಂಬುವವರನ್ನು ಬಂಧಿಸಲಾಗಿದೆ.
ಇನ್ನು, ಪ್ರಕರಣ ಸಂಬಂಧ ಎರಡು ಕಾರು, 1 ದ್ವಿಚಕ್ರ ವಾಹನ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.