ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇಬ್ಬರು ಆರೋಪಿಗಳ ಹೆಸರನ್ನು ಪ್ರಕಟಿಸಿದೆ.
ಆರೋಪಿ 1 : ಖಾಸಿಫ್ (30), ಬುದ್ಧಾನಗರ, ಶಿವಮೊಗ್ಗ
ಆರೋಪಿ 2 : ಸೈಯ್ಯದ್ ನದೀಂ (20), ಜೆ.ಪಿ.ನಗರ, ಶಿವಮೊಗ್ಗ
ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇವರ ವಿರುದ್ಧ ಐಪಿಸಿ 302 ಸೆಕ್ಷನ್ ಅಡಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.