ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 1 MAY 2021
ಲಾಕ್ಡೌನ್ ಮಾದರಿ ಕರ್ಫ್ಯೂ ಸಂದರ್ಭವನ್ನೆ ಲಾಭ ಮಾಡಿಕೊಳ್ಳಲು ಮುಂದಾಗಿದ್ದ ತೀರ್ಥಹಳ್ಳಿಯ ಎರಡು ಅಂಗಡಿಗಳ ಮಾಲೀಕರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಧಿಕ ಬೆಲೆಗೆ ವಸ್ತುಗಳನ್ನು ಮಾರಾಟದ ಮೇಲೆ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ.
ತೀರ್ಥಹಳ್ಳಿಯ ಆಗುಂಬೆ ಸರ್ಕಲ್ ಮತ್ತು ಸಾಗರ ರಸ್ತೆಯಲ್ಲಿರುವ ಸಿಗರೇಟ್ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ.
ಕರ್ಫ್ಯೂ ಅವಧಿಯಲ್ಲಿ ನಿಗದಿಗಿಂತಲೂ ಹೆಚ್ಚಿನ ದರಕ್ಕೆ ವಸ್ತುಗಳ ಮಾರಾಟವಾಗುತ್ತಿತ್ತು. ಈ ಹಿನ್ನೆಲೆ ಕಾನೂನು ಮಾಪನಶಸ್ತ್ರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]