ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಏರ್‌ ಆಂಬುಲೆನ್ಸ್‌ ವಿಮಾನ, ಮೆಟ್ರೋ ಆಸ್ಪತ್ರೆಯಿಂದ ಮಣಿಪಾಲಕ್ಕೆ ರೋಗಿ ಶಿಫ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 JANUARY 2024

SHIMOGA : ಎದೆ ನೋವಿನಿಂದ ಬಳಲುತ್ತಿದ್ದ ಶಿವಮೊಗ್ಗದ ಗಾಂಧಿ ಬಜಾರ್‌ ನಿವಾಸಿಯೊಬ್ಬರನ್ನು ಏರ್‌ ಆಂಬುಲೆನ್ಸ್‌ ಮೂಲಕ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೆ ಮೊದಲ ಬಾರಿ ಶಿವಮೊಗ್ಗ ವಿಮಾನ ನಿಲ್ದಾಣದವನ್ನು ಏರ್‌ ಆಂಬುಲೆನ್ಸ್‌ಗಾಗಿ ಬಳಸಿಕೊಳ್ಳಲಾಗಿದೆ.

ಚೇತನ್‌ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್‌ ವೇಳೆ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಪಕ್ಕದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಬೇಕಾಗಿತ್ತು. ಈ ಹಿನ್ನೆಲೆ ಏರ್‌ ಆಂಬುಲೆನ್ಸ್‌ ಬಳಸಿಕೊಳ್ಳಲಾಗಿದೆ.

ಚೆನ್ನೈನಿಂದ ಏರ್‌ ಆಂಬುಲೆನ್ಸ್

ಚೇತನ್‌ ಅವರನ್ನು ಕರೆದೊಯ್ಯಲು ಚೆನ್ನೈನಲ್ಲಿರುವ ಏರ್‌ ಆಂಬುಲೆನ್ಸ್‌ಗೆ ಸಂಪರ್ಕಿಸಲಾಗಿತ್ತು. ಬುಧವಾರ ಸಂಜೆ ವೇಳಗೆ ಏರ್‌ ಆಂಬುಲೆನ್ಸ್‌ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಇಂದು ಬೆಳಗ್ಗೆ ವಿಸಿಬಲಿಟಿ ಸಮಸ್ಯೆಯಿಂದಾಗಿ ಏರ್‌ ಆಂಬುಲೆನ್ಸ್‌ ಟೇಕ್‌ ಆಫ್‌ ಆಗಲಿಲ್ಲ. ಮಧ್ಯಾಹ್ನ 1.05ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆಗಿದೆ. ಮಧ್ಯಾಹ್ನ 1.40ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದೆ. ವಿಶೇಷ ಆಂಬುಲೆನ್ಸ್‌ ಮೂಲಕ ಚೇತನ್‌ ಅವರನ್ನು ಕರೆದೊಯ್ದು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Air-Ambulance-in-Shimoga-Airport.

ಮೊದಲ ಬಾರಿ ಏರ್‌ ಆಂಬುಲೆನ್ಸ್‌

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಸೇವೆ ಆರಂಭವಾದಾಗಿನಿಂದ ನಾಗರಿಕ ವಿಮಾನ, ಖಾಸಗಿ ವಿಮಾನ ಮತ್ತು ಏರ್‌ ಫೋರ್ಸ್‌ ವಿಮಾನಗಳು ಲ್ಯಾಂಡ್‌ ಆಗಿದ್ದವು. ಇದೆ ಮೊದಲ ಬಾರಿಗೆ ಏರ್‌ ಆಂಬುಲೆನ್ಸ್‌ ಶಿವಮೊಗ್ಗದಿಂದ ಕಾರ್ಯಾಚರಿಸಿದೆ.

ಇದನ್ನೂ ಓದಿ – ಪಲ್ಸರ್‌ ಬೈಕ್‌ ಗಿಫ್ಟ್‌ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 11, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment