SHIVAMOGGA LIVE NEWS | 11 JANUARY 2024
SHIMOGA : ಎದೆ ನೋವಿನಿಂದ ಬಳಲುತ್ತಿದ್ದ ಶಿವಮೊಗ್ಗದ ಗಾಂಧಿ ಬಜಾರ್ ನಿವಾಸಿಯೊಬ್ಬರನ್ನು ಏರ್ ಆಂಬುಲೆನ್ಸ್ ಮೂಲಕ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೆ ಮೊದಲ ಬಾರಿ ಶಿವಮೊಗ್ಗ ವಿಮಾನ ನಿಲ್ದಾಣದವನ್ನು ಏರ್ ಆಂಬುಲೆನ್ಸ್ಗಾಗಿ ಬಳಸಿಕೊಳ್ಳಲಾಗಿದೆ.
ಚೇತನ್ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್ ವೇಳೆ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಪಕ್ಕದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಬೇಕಾಗಿತ್ತು. ಈ ಹಿನ್ನೆಲೆ ಏರ್ ಆಂಬುಲೆನ್ಸ್ ಬಳಸಿಕೊಳ್ಳಲಾಗಿದೆ.
ಚೆನ್ನೈನಿಂದ ಏರ್ ಆಂಬುಲೆನ್ಸ್
ಚೇತನ್ ಅವರನ್ನು ಕರೆದೊಯ್ಯಲು ಚೆನ್ನೈನಲ್ಲಿರುವ ಏರ್ ಆಂಬುಲೆನ್ಸ್ಗೆ ಸಂಪರ್ಕಿಸಲಾಗಿತ್ತು. ಬುಧವಾರ ಸಂಜೆ ವೇಳಗೆ ಏರ್ ಆಂಬುಲೆನ್ಸ್ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಇಂದು ಬೆಳಗ್ಗೆ ವಿಸಿಬಲಿಟಿ ಸಮಸ್ಯೆಯಿಂದಾಗಿ ಏರ್ ಆಂಬುಲೆನ್ಸ್ ಟೇಕ್ ಆಫ್ ಆಗಲಿಲ್ಲ. ಮಧ್ಯಾಹ್ನ 1.05ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದೆ. ಮಧ್ಯಾಹ್ನ 1.40ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದೆ. ವಿಶೇಷ ಆಂಬುಲೆನ್ಸ್ ಮೂಲಕ ಚೇತನ್ ಅವರನ್ನು ಕರೆದೊಯ್ದು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೊದಲ ಬಾರಿ ಏರ್ ಆಂಬುಲೆನ್ಸ್
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಸೇವೆ ಆರಂಭವಾದಾಗಿನಿಂದ ನಾಗರಿಕ ವಿಮಾನ, ಖಾಸಗಿ ವಿಮಾನ ಮತ್ತು ಏರ್ ಫೋರ್ಸ್ ವಿಮಾನಗಳು ಲ್ಯಾಂಡ್ ಆಗಿದ್ದವು. ಇದೆ ಮೊದಲ ಬಾರಿಗೆ ಏರ್ ಆಂಬುಲೆನ್ಸ್ ಶಿವಮೊಗ್ಗದಿಂದ ಕಾರ್ಯಾಚರಿಸಿದೆ.
ಇದನ್ನೂ ಓದಿ – ಪಲ್ಸರ್ ಬೈಕ್ ಗಿಫ್ಟ್ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200