SHIVAMOGGA LIVE NEWS | 13 MAY 2024
SHIMOGA : ಲಷ್ಕರ್ ಮೊಹಲ್ಲಾದಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ. ಶಿವಮೊಗ್ಗ ತಾಲೂಕು ಬೀರನಕೆರೆ ಗ್ರಾಮದ ಬಳಿ ಘಟನೆ ಸಂಭವಿಸಿದೆ.
![]() |
ಶೋಯಬ್ ಅಲಿಯಾಸ್ ಅಂಡ ಎಂಬಾತನ ಕಾಲಿಗೆ ಗುಂಡು ಹೊಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಇವತ್ತು ಬೆಳಗಿನ ಜಾವ ಶೋಯಬ್ನ ಬಂಧನಕ್ಕೆ ಪಿಎಸ್ಐ ಕುಮಾರ್ ಮತ್ತು ಸಿಬ್ಬಂದಿ ಅಣ್ಣಪ್ಪ ಬೀರನಕೆರೆಗೆ ತೆರಳಿದ್ದರು. ಈ ಸಂದರ್ಭ ಮಾರಕಾಸ್ತ್ರದಿಂದ ಪೊಲೀಸ್ ಸಿಬ್ಬಂದಿ ಮೇಲೆ ಆತ ದಾಳಿಗೆ ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಪಿಎಸ್ಐ ಕುಮಾರ್ ಗುಂಡು ಹಾರಿಸಿದ್ದಾರೆ.
ಶೋಯಬ್ ಅಲಿಯಾಸ್ ಅಂಡ ಹಲವು ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದ. ಆತನ ವಿರುದ್ಧ ವಿವಿಧ ಠಾಣೆಗಳಲ್ಲಿ ಐದು ಪ್ರಕರಣಗಳಿವೆ. ಈ ಪೈಕಿ ಎರಡು ಕೊಲೆ ಯತ್ನ ಪ್ರಕರಣಗಳಿವೆ. ಈತ ಆದಿಲ್ ಗ್ಯಾಂಗ್ನಲ್ಲಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 3 ಮರ್ಡರ್, ಬಂಧಿತರ ಹೆಸರು ಬಹಿರಂಗ, ಬಿಗಿ ಬಂದೋಬಸ್ತ್ನಲ್ಲಿ ಯಾಸಿನ್ ಅಂತ್ಯಸಂಸ್ಕಾರ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200