SHIVAMOGGA LIVE NEWS | 13 MAY 2024
SHIMOGA : ಲಷ್ಕರ್ ಮೊಹಲ್ಲಾದಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ. ಶಿವಮೊಗ್ಗ ತಾಲೂಕು ಬೀರನಕೆರೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಶೋಯಬ್ ಅಲಿಯಾಸ್ ಅಂಡ ಎಂಬಾತನ ಕಾಲಿಗೆ ಗುಂಡು ಹೊಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಇವತ್ತು ಬೆಳಗಿನ ಜಾವ ಶೋಯಬ್ನ ಬಂಧನಕ್ಕೆ ಪಿಎಸ್ಐ ಕುಮಾರ್ ಮತ್ತು ಸಿಬ್ಬಂದಿ ಅಣ್ಣಪ್ಪ ಬೀರನಕೆರೆಗೆ ತೆರಳಿದ್ದರು. ಈ ಸಂದರ್ಭ ಮಾರಕಾಸ್ತ್ರದಿಂದ ಪೊಲೀಸ್ ಸಿಬ್ಬಂದಿ ಮೇಲೆ ಆತ ದಾಳಿಗೆ ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಪಿಎಸ್ಐ ಕುಮಾರ್ ಗುಂಡು ಹಾರಿಸಿದ್ದಾರೆ.
ಶೋಯಬ್ ಅಲಿಯಾಸ್ ಅಂಡ ಹಲವು ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದ. ಆತನ ವಿರುದ್ಧ ವಿವಿಧ ಠಾಣೆಗಳಲ್ಲಿ ಐದು ಪ್ರಕರಣಗಳಿವೆ. ಈ ಪೈಕಿ ಎರಡು ಕೊಲೆ ಯತ್ನ ಪ್ರಕರಣಗಳಿವೆ. ಈತ ಆದಿಲ್ ಗ್ಯಾಂಗ್ನಲ್ಲಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 3 ಮರ್ಡರ್, ಬಂಧಿತರ ಹೆಸರು ಬಹಿರಂಗ, ಬಿಗಿ ಬಂದೋಬಸ್ತ್ನಲ್ಲಿ ಯಾಸಿನ್ ಅಂತ್ಯಸಂಸ್ಕಾರ