| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 13 MAY 2024
SHIMOGA : ಲಷ್ಕರ್ ಮೊಹಲ್ಲಾದಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ. ಶಿವಮೊಗ್ಗ ತಾಲೂಕು ಬೀರನಕೆರೆ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಶೋಯಬ್ ಅಲಿಯಾಸ್ ಅಂಡ ಎಂಬಾತನ ಕಾಲಿಗೆ ಗುಂಡು ಹೊಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಇವತ್ತು ಬೆಳಗಿನ ಜಾವ ಶೋಯಬ್ನ ಬಂಧನಕ್ಕೆ ಪಿಎಸ್ಐ ಕುಮಾರ್ ಮತ್ತು ಸಿಬ್ಬಂದಿ ಅಣ್ಣಪ್ಪ ಬೀರನಕೆರೆಗೆ ತೆರಳಿದ್ದರು. ಈ ಸಂದರ್ಭ ಮಾರಕಾಸ್ತ್ರದಿಂದ ಪೊಲೀಸ್ ಸಿಬ್ಬಂದಿ ಮೇಲೆ ಆತ ದಾಳಿಗೆ ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಪಿಎಸ್ಐ ಕುಮಾರ್ ಗುಂಡು ಹಾರಿಸಿದ್ದಾರೆ.
ಶೋಯಬ್ ಅಲಿಯಾಸ್ ಅಂಡ ಹಲವು ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದ. ಆತನ ವಿರುದ್ಧ ವಿವಿಧ ಠಾಣೆಗಳಲ್ಲಿ ಐದು ಪ್ರಕರಣಗಳಿವೆ. ಈ ಪೈಕಿ ಎರಡು ಕೊಲೆ ಯತ್ನ ಪ್ರಕರಣಗಳಿವೆ. ಈತ ಆದಿಲ್ ಗ್ಯಾಂಗ್ನಲ್ಲಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 3 ಮರ್ಡರ್, ಬಂಧಿತರ ಹೆಸರು ಬಹಿರಂಗ, ಬಿಗಿ ಬಂದೋಬಸ್ತ್ನಲ್ಲಿ ಯಾಸಿನ್ ಅಂತ್ಯಸಂಸ್ಕಾರ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()