ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 13 MAY 2024

SHIMOGA : ಲಷ್ಕರ್‌ ಮೊಹಲ್ಲಾದಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ. ಶಿವಮೊಗ್ಗ ತಾಲೂಕು ಬೀರನಕೆರೆ ಗ್ರಾಮದ ಬಳಿ ಘಟನೆ ಸಂಭವಿಸಿದೆ.

ಶೋಯಬ್‌ ಅಲಿಯಾಸ್‌ ಅಂಡ ಎಂಬಾತನ ಕಾಲಿಗೆ ಗುಂಡು ಹೊಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಇವತ್ತು ಬೆಳಗಿನ ಜಾವ ಶೋಯಬ್‌ನ ಬಂಧನಕ್ಕೆ ಪಿಎಸ್‌ಐ ಕುಮಾರ್‌ ಮತ್ತು ಸಿಬ್ಬಂದಿ ಅಣ್ಣಪ್ಪ ಬೀರನಕೆರೆಗೆ ತೆರಳಿದ್ದರು. ಈ ಸಂದರ್ಭ ಮಾರಕಾಸ್ತ್ರದಿಂದ ಪೊಲೀಸ್‌ ಸಿಬ್ಬಂದಿ ಮೇಲೆ ಆತ ದಾಳಿಗೆ ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಪಿಎಸ್‌ಐ ಕುಮಾರ್‌ ಗುಂಡು ಹಾರಿಸಿದ್ದಾರೆ.

ಶೋಯಬ್‌ ಅಲಿಯಾಸ್‌ ಅಂಡ ಹಲವು ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದ. ಆತನ ವಿರುದ್ಧ ವಿವಿಧ ಠಾಣೆಗಳಲ್ಲಿ ಐದು ಪ್ರಕರಣಗಳಿವೆ. ಈ ಪೈಕಿ ಎರಡು ಕೊಲೆ ಯತ್ನ ಪ್ರಕರಣಗಳಿವೆ. ಈತ ಆದಿಲ್‌ ಗ್ಯಾಂಗ್‌ನಲ್ಲಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ 3 ಮರ್ಡರ್‌, ಬಂಧಿತರ ಹೆಸರು ಬಹಿರಂಗ, ಬಿಗಿ ಬಂದೋಬಸ್ತ್‌ನಲ್ಲಿ ಯಾಸಿನ್‌ ಅಂತ್ಯಸಂಸ್ಕಾರ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment