Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಂಗಮೇಶ್ವರ, ಬೇಳೂರಿಗೆ ನಿಗಮದ ಅಧ್ಯಕ್ಷ ಸ್ಥಾನ, ಯಾವ ನಿಗಮ? ಅವುಗಳ ಜವಾಬ್ದಾರಿ ಏನು?

ಸಂಗಮೇಶ್ವರ, ಬೇಳೂರಿಗೆ ನಿಗಮದ ಅಧ್ಯಕ್ಷ ಸ್ಥಾನ, ಯಾವ ನಿಗಮ? ಅವುಗಳ ಜವಾಬ್ದಾರಿ ಏನು?

27/01/2024 8:50 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 27 JANUARY 2024

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಲಿದಿದೆ. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ (ಲ್ಯಾಂಡ್‌ ಆರ್ಮಿ) ಅಧ್ಯಕ್ಷ ಸ್ಥಾನ ನೀಡಲಾಗಿದೆ. ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಹಿಂದೆ ತಿರಸ್ಕರಿಸಿದ್ದ ಅಧ್ಯಕ್ಷ ಸ್ಥಾನ

Siddaramaiah-and-Sangameshwara-in-Bhadravathi.

ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಈ ಬಾರಿಯು ಸಚಿವ ಸ್ಥಾನ ಕೈ ತಪ್ಪಿದೆ. ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಸದ್ಯ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ. ಈ ಹಿಂದೆಯೂ ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಇದೇ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಆಗ ಸಂಗಮೇಶ್ವರ ಅವರು ಅದನ್ನು ತಿರಸ್ಕರಿಸಿದ್ದರು.

ಈ ನಿಗಮದ ಕೆಲಸವೇನು?

ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮವು (ಕೆಆರ್‌ಐಡಿಎಲ್‌) ಲ್ಯಾಂಡ್‌ ಆರ್ಮಿ ಎಂದೇ ಜನಜನಿತ. ಗ್ರಾಮೀಣ ಭಾಗದಲ್ಲಿ ಮಧ್ಯವರ್ತಿಗಳು, ಗುತ್ತಿಗೆದಾರರನ್ನು ದೂರವಿಟ್ಟು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಈ ನಿಗಮದ ಪ್ರಮುಖ ಉದ್ದೇಶ. 800ಕ್ಕೂ ಹೆಚ್ಚು ಸಿಬ್ಬಂದಿ ಹೊಂದಿದೆ. ಎಲ್ಲ ಜಿಲ್ಲೆಗಳಲ್ಲೂ ಕಚೇರಿ ಮತ್ತು ಸಬ್‌ ಡಿವಿಷನ್‌ ಕಚೇರಿಗಳನ್ನು ಹೊಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಮತ್ತು ಶಿಕಾರಿಪುರದಲ್ಲಿ ಕಚೇರಿಗಳಿವೆ. ಗ್ರಾಮೀಣ ಸಂಪರ್ಕ ರಸ್ತೆ, ಸೇತುವೆ, ಶಾಲೆ, ಆಸ್ಪತ್ರೆಗಳು, ಹಾಸ್ಟೆಲ್‌, ಜಲ ಸಂವರ್ಧನಾ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಿರ್ವಹಿಸಲಿದೆ.

ಬೇಳೂರಿಗೆ ಮೊದಲ ಬಾರಿ ಸರ್ಕಾರಿ ಹುದ್ದೆ

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಮೂರನೇ ಬಾರಿ ಶಾಸಕರಾಗಿರುವ ಹಿನ್ನೆಲೆ ಸಹಜವಾಗಿಯೇ ಸಚಿವ ಸ್ಥಾನದ ನಿರೀಕ್ಷೆ ಇತ್ತು. ಈಚೆಗೆ ಸಂಸತ್‌ ಚುನಾವಣೆಗೆ ಸ್ಪರ್ಧಿಸುವ ಇರಾದೆಯನ್ನೂ ವ್ಯಕ್ತಪಡಿಸಿದ್ದರು. ಆದರೆ ಪಕ್ಷ ನಿಗಮ ಅಧ್ಯಕ್ಷ ಸ್ಥಾನ ನೀಡಿದೆ. ಇದೇ ಮೊದಲ ಬಾರಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರಿ ಹುದ್ದೆ ಒಲಿದಿದೆ.

081123 Sagara Beluru Gopalakrishna press meet

ನಿಗಮದ ಕೆಲಸವೇನು?

ಅರಣ್ಯ ಉತ್ಪನ್ನಗಳನ್ನು ತಯಾರಿಸುವುದು ಈ ನಿಗಮದ ಪ್ರಮುಖ ಉದ್ದೇಶ. ಫ್ಲಷ್ ಬಾಗಿಲು, ಹಲಗೆ ಫಲಕಗಳು, ಕಿಟಕಿಗಳು, ಬಾಗಿಲುಗಳು, ದೇಶೀಯ ಮತ್ತು ಅಧಿಕಾರಿ ಪೀಠೋಪಕರಣಗಳನ್ನು ತಯಾರಿಸುತ್ತಿದೆ. ಬೆಂಗಳೂರಿನಲ್ಲಿ ಕೇಂದ್ರ ಕಚೇರಿ, ಟಿಂಬರ್‌ಯಾರ್ಡ್‌, ದಾಂಡೇಲಿ, ಧಾರವಾಡ, ಶಿರಸಿ, ಶಿವಮೊಗ್ಗ, ಮಂಗಳೂರಿನಲ್ಲಿ ಕಚೇರಿಯನ್ನು ಹೊಂದಿದೆ.

ಇದನ್ನೂ ಓದಿ – ನಿಗಮ ಮಂಡಳಿಗೆ ನೇಮಕ ವಿಚಾರ, ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ ಮಂಜುನಾಥಗೌಡ, ಏನಂದರು?

ಮೂವರು ಕಾಂಗ್ರೆಸ್‌ ಶಾಸಕರಿಗು ಅಧಿಕಾರ

2023ರ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈ ಪೈಕಿ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಈಗ ಸಂಗಮೇಶ್ವರ ಮತ್ತು ಬೇಳೂರು ಗೋಪಾಲಕೃಷ್ಣ ಅವರಿಗೆ ನಿಗಮಗಳ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಜಿಲ್ಲೆಯ ಮೂವರು ಕಾಂಗ್ರೆಸ್‌ ಶಾಸಕರಿಗು ಸರ್ಕಾರಿ ಸ್ಥಾನಮಾನ ನೀಡಿದಂತಾಗಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Savalanga-Road-flyover-inaugurated-by-BY-Raghavendra ಶಿವಮೊಗ್ಗದ ಸವಳಂಗ ರಸ್ತೆಯ ರೈಲ್ವೆ ಮೇಲ್ಸೇತುವೆ ಮೇಲೆ ವಾಹನ ಸಂಚಾರ ಶುರು
Next Article 150121 Rudregowda MLC BJP Shimoga ಶಿವಮೊಗ್ಗದಲ್ಲಿ ಇವತ್ತು ಅಮೃತಮಯಿ, ವಿವಿಧ ವಿಷಯಗಳ ಸಂವಾದ, ಸಂಜೆ ಅದ್ಧೂರಿ ಅಭಿನಂದನಾ ಸಮಾರಂಭ

ಇದನ್ನೂ ಓದಿ

Shimoga-Jds-leaders-meet-Central-Minister-Kumaraswamy-VISL
Uncategorized

ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
Vidyanagara-Smart-city-board
Uncategorized

ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
RESULT-THUMBNAIL1
POLITICSUncategorized

ಶಿವಮೊಗ್ಗ ಫಲಿತಾಂಶ LIVE | ಎರಡು ಲಕ್ಷ ದಾಟಿದ ಅಂತರ, ಈತನಕ ರಾಘವೇಂದ್ರ ಪಡೆದ ಮತಗಳೆಷ್ಟು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 21 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/05/2024
Shohib-aliya-anda-arrested-by-police-near-beeranakere
Uncategorized

ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?