ಗಾಜನೂರು ಬಳಿ ಹಾವಿನ ಮೇಲೆ ಹತ್ತುವುದನ್ನು ತಪ್ಪಿಸಲು ಹೋಗಿ ಚಾನಲ್’ಗೆ ಬಿದ್ದ ಕಾರು, ಮಹಿಳೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 3 ಫೆಬ್ರವರಿ 2022

ಹಾವಿನ ಮೇಲೆ ಹತ್ತುವುದನ್ನು ತಪ್ಪಿಸಲು ಹೋಗಿ ಕಾರೊಂದು ತುಂಗಾ ಚಾನೆಲ್’ನಲ್ಲಿ ಮುಳುಗಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

Nanjappa Hospital Home Care

ಶಿವಮೊಗ್ಗ ತಾಲೂಕು ಗಾಜನೂರು ಬಳಿ ಇವತ್ತು ಬೆಳಗಿನ ಜಾವ ಘಟನೆ ಸಂಭವಿಸಿದೆ. ಚಾನಲ್’ಗೆ ಬೀಳುತ್ತಿದ್ದಂತೆ ಕಾರಿನಲ್ಲಿದ್ದ ದಂಪತಿ ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ. ಬಹು ಹೊತ್ತು ಯಾರೂ ಬಾರದಿದ್ದರಿಂದ ಮಹಿಳೆ ಸಾವನ್ನಪ್ಪಿದ್ದಾರೆ.

ಸುಷ್ಮಾ (28) ಮೃತ ಮಹಿಳೆ. ನವೋದಯ ಶಾಲೆಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಪತಿ ಚೇತನ್ ಕುಮಾರ್ ಜೊತೆಗೆ ಕಾರಿನಲ್ಲಿ ತುಮಕೂರಿಗೆ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.

ಹೇಗಾಯ್ತು ಘಟನೆ?

ಚೇತನ್ ಅವರ ತಾಯಿ ತುಮಕೂರಿನಲ್ಲಿದ್ದಾರೆ. ಅವರಿಗೆ ಎದೆ ನೋವು ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿತ್ತು. ಆದ್ದರಿಂದ ಚೇತನ್ ಕುಮಾರ್ ತಮ್ಮ ಪತ್ನಿ ಸುಷ್ಮಾ ಅವರೊಂದಿಗೆ ಬೆಳಗಿನ ಜಾವ ಕಾರಿನಲ್ಲಿ ಹೊರಟಿದ್ದಾರೆ. ನವೋದಯ ಶಾಲೆ ಕ್ವಾರ್ಟರ್ಸ್’ನಲ್ಲಿದ್ದ ಮನೆಯಿಂದ ಇಬ್ಬರು ಹೊರಟಿದ್ದಾರೆ.

ತುಂಗಾ ಎಡದಂಡೆ ನಾಲೆ ಪಕ್ಕದ ರಸ್ತೆ ಮೇಲೆ ಕಾರು ಚಲಿಸುತ್ತಿತ್ತು. ಈ ವೇಳೆ ಒಂದು ಹಾವು ದಿಢೀರ್ ರಸ್ತೆಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಹಾವಿನ ಮೇಲೆ ಕಾರು ಹತ್ತುವುದನ್ನು ತಪ್ಪಿಸಲು ಹೋಗಿ ಚೇತನ್ ಅವರು ಕಾರನ್ನು ಪಕ್ಕಕ್ಕೆ ತಿರುಗಿಸಿದ್ದಾರೆ. ವೇಗದಲ್ಲಿದ್ದ ಕಾರು ನಿಯಂತ್ರಣ ತಪ್ಪಿ ಚಾನಲ್’ಗೆ ಬಿದ್ದಿದೆ.

Cancer Unit of Nanjappa Hospital

ರಕ್ಷಣೆಗಾಗಿ ಬಹು ಹೊತ್ತು ಕೂಗಿದರು

ಚಾನೆಲ್’ಗೆ ಬಿದ್ದು ಕಾರು ಮುಳುಗುತ್ತಿದ್ದಂತೆ ಚೇತನ್ ಕುಮಾರ್ ಬಾಗಿಲು ತೆಗೆದು ಹೊರಗೆ ಬಂದಿದ್ದಾರೆ. ಪತ್ನಿಯ ಕಡೆಯ ಬಾಗಿಲನ್ನು ತೆಗೆದು ಅವರನ್ನು ಹೊರಗೆಳೆದಿದ್ದಾರೆ ಎಂದು ಹೇಳಲಾಗುತ್ತಿದೆ. ಬಳಿಕ ಇಬ್ಬರೂ ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ. ಸುಮಾರು ಒಂದು ಗಂಟೆಯ ಬಳಿಕ ಗಾಜನೂರು ಗ್ರಾಮಸ್ಥರಾದ ಮಂಜುಳಾ, ವಾಸುದೇವ್, ಜ್ಯೋತಿ, ಶಿವರಾಜ್ ಅವರು ಶಬ್ದ ಕೇಳಿ ನಾಲೆ ಬಳಿಗೆ ಬಂದಿದ್ದಾರೆ.

ನೀರಿನಲ್ಲೇ ಸುಷ್ಮಾ ಕೊನೆಯುಸಿರು

ಒಂದು ಗಂಟೆಗೂ ಹೆಚ್ಚು ಹೊತ್ತು ನೀರಿನಲ್ಲಿದ್ದ ಸುಷ್ಮಾ, ಅಲ್ಲಿಯೇ ಪ್ರಾಣ ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಷ್ಮಾ ನೀರು ಕುಡಿದು ಮೃತಪಟ್ಟಿರುವ ಸಾದ್ಯತೆ ಇದೆ. ಸ್ಥಳೀಯರು ಬಂದು ಸುಷ್ಮಾ ಮತ್ತು ಚೇತನ್ ಕುಮಾರ್ ಅವರ ರಕ್ಷಣೆ ಮಾಡಿದ್ದಾರೆ. ಆ ಹೊತ್ತಿಗಾಗಲೆ ಸುಷ್ಮಾ ಪ್ರಜ್ಞಾಹೀನರಾಗಿದ್ದರು.

ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

about smg live readers

About Shivamogga LiveShimoga District Profile

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 3, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment