SHIVAMOGGA LIVE NEWS | 30 DECEMBER 2022
ಶಿವಮೊಗ್ಗ : ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಅವರ ವಿರುದ್ಧ ದೂರು (case filed) ನೀಡಲಾಗಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಶಿವಮೊಗ್ಗದ ಎನ್.ಇ.ಎಸ್ ಮೈದಾನದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ತ್ರೈ ವಾರ್ಷಿಕ ಪ್ರಾಂತ ಸಮ್ಮೇಳನದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಅವರು ದಿಕ್ಸೂಚಿ ಭಾಷಣ ಮಾಡಿದ್ದರು. ಇದರಲ್ಲಿ ಪ್ರಚೋದನಕಾರಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ದೂರು (case filed) ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಧ್ವಿ ಗುಡುಗು, ಸಮ್ಮೇಳನದಲ್ಲಿ ಪ್ರಜ್ಞಾ ಸಿಂಗ್ ಭಾಷಣದ ಟಾಪ್ 12 ಪಾಯಿಂಟ್
ಪ್ರತಿ ಮನೆಯಲ್ಲಿಯು ಶಸ್ತ್ರಗಳನ್ನು ಇಟ್ಟುಕೊಳ್ಳಬೇಕು. ತರಿಕಾರಿ ಕೊಯ್ಯುವ ಚಾಕುವನ್ನು ಹರಿತವಾಗಿ ಇಟ್ಟುಕೊಳ್ಳಬೇಕು ಎಂದು ಸೇರಿದಂತೆ ಪ್ರಚೋದನೆ ನೀಡುವ ಅಂಶಗಳು ಭಾಷಣದಲ್ಲಿವೆ. ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಸಾಧ್ವಿ ಪ್ರಜ್ಞಾ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೆಚ್.ಎಸ್.ಸುಂದರೇಶ್ ದೂರಿನಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200