ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022
ಶೌಚಾಲಯದಲ್ಲಿ ನಾಗರ ಹಾವು ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದವರನ್ನು ಬೆಚ್ಚಿ ಬೀಳಿಸಿದೆ. ವಿಚಾರ ತಿಳಿದು ಕೂಡಲೆ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ಹಾವನ್ನು ಹಿಡಿದು, ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಈ ಸಂದರ್ಭ ಮನೆಯವರು ಹಾವಿಗೆ ಪೂಜೆ ಮಾಡಿ, ಮಂಗಳಾರತಿ ಬೆಳಗಿದರು.
ಶಿವಮೊಗ್ಗದ ಶಿವಪ್ಪನಾಯಕ ಬಡಾವಣೆಯ ಮನೆಯೊಂದರ ಶೌಚಾಲಯದಲ್ಲಿ ಹಾವು ಕಾಣಿಸಿಕೊಂಡಿದೆ. ಟಾಯ್ಲೆಟ್ ಪಿಟ್’ನಲ್ಲಿ ಹಾವು ಇರುವುದು ಗೊತ್ತಾಗುತ್ತಿದ್ದಂತೆ ಮನೆಯವರು ಆತಂಕಕ್ಕೀಡಾಗಿದ್ದಾರೆ.
ಹಾವು ರಕ್ಷಿಸಿದ ಸ್ನೇಕ್ ಕಿರಣ್
ಹಾವು ಇರುವ ವಿಚಾರ ತಿಳಿದು ಉರಗ ರಕ್ಷಕ ಸ್ನೇಕ್ ಕಿರಣ್ ಅವರು ಸ್ಥಳಕ್ಕೆ ಭೇಟಿ ನೀಡಿದರು. ಟಾಯ್ಲೆಟ್ ಪಿಟ್’ನಲ್ಲಿದ್ದ ಹಾವನ್ನು ರಕ್ಷಣೆ ಮಾಡಿದರು. ಅಲ್ಲದೆ ಮನೆಯವರು ಮತ್ತು ಸುತ್ತಮುತ್ತಲ ನಿವಾಸಿಗಳಿಗೆ ಹಾವಿನ ಕುರಿತು ಜಾಗೃತಿ ಮೂಡಿಸಿದರು.
ಹಾವಿಗೆ ಮಂಗಳಾರತಿ ಬೆಳಗಿದರು
ಇನ್ನು, ಸ್ನೇಕ್ ಕಿರಣ್ ಅವರು ನಾಗರ ಹಾವು ಹಿಡಿದು ಮನೆಯಿಂದ ಹೊರಗೆ ತರುತ್ತಿದ್ದಂತೆ, ಮನೆ ಒಡತಿ ಶಬರಿ ಅವರು ಪೂಜೆ ಸಲ್ಲಿಸಿದರು. ಹಾವಿಗೆ ಮಂಗಳಾರತಿ ಬೆಳಗಿದರು. ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಸ್ನೇಕ್ ಕಿರಣ್ ಅವರು ಹಾವನ್ನು ಕಾಡಿಗೆ ಬಿಟ್ಟರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200