ಶಿವಮೊಗ್ಗದಲ್ಲಿ ಕರೋನ ಭೀತಿ ಹೆಚ್ಚಳ, ಓಂ ಶಕ್ತಿ ದರ್ಶನಕ್ಕೆ ಹೋಗಿ ಬಂದವರಿಗೆ ಪಾಸಿಟಿವ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022

ತಮಿಳುನಾಡಿನಲ್ಲಿ ಓಂ ಶಕ್ತಿ ದರ್ಶನ ಪಡೆದು ಶಿವಮೊಗ್ಗಕ್ಕೆ ಮರಳಿರುವ ಆರು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿವಮೊಗ್ಗ, ಭದ್ರಾವತಿಯಿಂದ ನಾಲ್ಕು ಸಾವಿರಕ್ಕೂ ಅಧಿಕ ಮಹಿಳೆಯರು, ಮಕ್ಕಳು ಓಂ ಶಕ್ತಿ ದರ್ಶನ ಪಡೆಯಲು ತಮಿಳುನಾಡಿಗೆ ತೆರಳಿದ್ದರು. ಅವರೆಲ್ಲ ಜಿಲ್ಲೆಗೆ ಮರಳುತ್ತಿದ್ದಂತೆ ಪರೀಕ್ಷೆ ನಡೆಸಲಾಗಿದೆ. ಆರು ಮಂದಿಗೆ ಕರೋನ ಸೋಂಕು ತಗುಲಿರುದು ದೃಢವಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ‘ಬುಧವಾರ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಗುರುವಾರ ರಾಂಡಮ್ ಟೆಸ್ಟ್ ಮಾಡಿದಾಗ ಮತ್ತೆ ನಾಲ್ವರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಓಂ ಶಕ್ತಿ ದರ್ಶನ ಪಡೆದು ಬಂದ ಒಟ್ಟು ಆರು ಮಂದಿಗೆ ಸೋಂಕು ತಗುಲಿದೆ’ ಎಂದು ತಿಳಿಸಿದರು.

ಇನ್ನು ಮೂರ್ನಾಲ್ಕು ದಿನ ನಿಗಾ

ಓಂ ಶಕ್ತಿ ದರ್ಶನ ಪಡೆದು ಹಿಂತಿರುಗುವವರಿಗೆ ಏಳು ದಿನ ಹೋಮ್ ಕ್ವಾರಂಟೈನ್’ಗೆ ಒಳಗಾಗುವಂತೆ ಸೂಚಿಸಲಾಗಿತ್ತು. ಅದರ ನಡುವೆ ರಾಂಡಮ್ ಟೆಸ್ಟ್ ಮಾಡಲಾಗುತ್ತಿದೆ. ಈ ವೇಳೆ ಸೋಂಕು ಕಾಣಿಸಿಕೊಳ್ಳುತ್ತಿದೆ.

‘ದರ್ಶನ ಪಡೆದು ಹಿಂತಿರುಗಿದ ದಿನವೆ ಕರೋನಾ ಟೆಸ್ಟ್ ಮಾಡಿದ್ದೇವೆ. ಆ ದಿನವೇ ಪಾಸಿಟಿವ್ ಬರಬೇಕ ಎಂದೇನಿಲ್ಲ. ಮೂರ್ನಾಲ್ಕು ದಿನದ ಬಳಿಕವು ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಇನ್ನೂ ಮೂರ್ನಾಲ್ಕು ದಿನ ಇವರ ಮೇಲೆ ನಿಗಾ ಇಡುತ್ತೇವೆ. ರಾಂಡಮ್ ಟೆಸ್ಟ್ ಮುಂದುವರೆಸುತ್ತೇವೆ’ ಎಂದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

050122 Om Shakthi Travellers Covid Testing Near Sahyadri College

ಓಂ ಶಕ್ತಿ ಯಾತ್ರಾರ್ಥಿಗಳಿಂದ ಆತಂಕ

ಮೂರನ ಅಲೆ ಕರೋನ ವ್ಯಾಪಕವಾಗಿ ಹರಡುತ್ತಿದ್ದ ಹೊತ್ತಲ್ಲೆ ಓಂ ಶಕ್ತಿ ದರ್ಶನಕ್ಕೆ ತೆರಳಲಾಗಿತ್ತು. ಶಿವಮೊಗ್ಗ, ಭದ್ರಾವತಿಯಿಂದ 80ಕ್ಕೂ ಹೆಚ್ಚು ಬಸ್ಸುಗಳಲ್ಲಿ ಮಹಿಳೆಯರು, ಮಕ್ಕಳು ಪ್ರವಾಸ ಕೈಗೊಂಡಿದ್ದರು. ವಿವಿಧ ದೇಗುಲಗಳಿಗೆ ಭೇಟಿ ನೀಡಿದ ಬಳಿಕ ಶಿವಮೊಗ್ಗಕ್ಕೆ ಹಿಂತಿರುಗಿದ್ದಾರೆ. ನಾಲ್ಕು ಸಾವಿರಕ್ಕೂ ಅಧಿಕ ಮಹಿಳೆಯರು, ಮಕ್ಕಳಿಗೆ ಹೋಮ್ ಕ್ವಾರಂಟೈನ್’ಗೆ ಸೂಚಿಸಲಾಗಿದೆ.

ಈಗ ಆರು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಓಂ ಶಕ್ತಿ ಪ್ರವಾಸವೇ ಸೂಪರ್ ಸ್ಪ್ರೆಡ್ಡರ್ ಆಗುವ ಭೀತಿಯಲ್ಲಿ ಜಿಲ್ಲಾಡಳಿತ ನಿಗಾ ವಹಿಸಿದೆ.

ABOUT ME DECEMBER REPORT

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment