Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ‘ಶಿವಮೊಗ್ಗದಲ್ಲಿ ಕೋಟಿ ಕೋಟಿ ಹಗರಣ, ಈಗ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ಸಿಬಿಐ ತನಿಖೆಗೆ ಆಗ್ರಹ

‘ಶಿವಮೊಗ್ಗದಲ್ಲಿ ಕೋಟಿ ಕೋಟಿ ಹಗರಣ, ಈಗ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ಸಿಬಿಐ ತನಿಖೆಗೆ ಆಗ್ರಹ

04/01/2022 2:11 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್‌.ಕಾಂ | SHIMOGA NEWS | 4 ಜನವರಿ 2022

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಹಳ್ಳಿ ಹಳ್ಳಿಗೆ ವಿದ್ಯುತ್ ಪೂರೈಕೆ ಮಾಡುವ ನಿರಂತರ ಜ್ಯೋತಿ ಯೋಜನೆಯಲ್ಲಿ ಕೋಟಿ ಕೋಟಿ ರೂ. ಅವ್ಯವಹಾರ ನಡೆದಿದೆ. ಇದನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಜಿಲ್ಲೆಯಲ್ಲಿ 693 ಗ್ರಾಮಗಳಿವೆ. 24 ಗಂಟೆ ವಿದ್ಯುತ್ ಪೂರೈಕೆ ಮಾಡಲು ನಿರಂತರ ಜ್ಯೋತಿ ಯೋಜನೆಗೆ 240 ಕೋಟಿ ಕೊಡಲಾಗಿದೆ. 110 ಕೋಟಿಯನ್ನು ಗುತ್ತಿಗೆದಾರರಿಗೆ ಪಾವತಿ ಮಾಡಲಾಗಿದೆ. ಇದರಲ್ಲಿ ಅವ್ಯವಹಾರವಾಗಿದೆ ಅಂತಾ ಮೊದಲೆ ತಿಳಿಸಿದ್ದೆವು ಎಂದರು.

ಸರಿ ಮಾಡಿಕೊಳ್ಳಿ ಅಂತಾ ಸಚಿವರೆ ಹೇಳಿದರು

ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕೆರೆದು ಐದು ಕೋಟಿ ರೂ. ಹೆಚ್ಚು ಪಾವತಿಯಾಗಿದೆ. ಅದನ್ನು ಸರಿ ಮಾಡಿಕೊಳ್ಳಬೇಕು ಎಂದು ಎಂಟು ತಿಂಗಳ ಹಿಂದೆ ಸಭೆಯಲ್ಲಿ ಹೇಳಿದ್ದರು. ಮತ್ತೊಂದು ಸಭೆ ಮಾಡಿ 12.29 ಕೋಟಿ ರೂ. ಅವ್ಯವಹಾರ ನಡೆದಿದೆ ಸರಿ ಮಾಡಿಕೊಳ್ಳಿ ಎಂದು ಜಿಲ್ಲಾ ಸಚಿವರು ಹೇಳುವ ಮೂಲಕ ಅವ್ಯವಹಾರ ಆಗಿದೆ ಅನ್ನುವುದನ್ನು ಸಾಬೀತಾದಂತಾಗಿದೆ ಎಂದರು.

ನಿರಂತರ ಜ್ಯೋತಿ ಯೋಜನೆಯಲ್ಲಿ 89 ಸಾವಿರ ವಿದ್ಯುತ್ ಕಂಬಗಳನ್ನು ಸರಿಯಾಗಿ ಅಳವಡಿಸಿಲ್ಲ ಎಂದು ಇಂಧನ ಸಚಿವರು ಶಿವಮೊಗ್ಗ ಭೇಟಿ ವೇಳೆ ಹೇಳಿದ್ದಾರೆ. ವಾಸ್ತವದಲ್ಲಿ ಈ ಯೋಜನೆ ಸುಮಾರು 40 ರಿಂದ 50 ಕೋಟಿ ರೂ.ನಷ್ಟು ಅವ್ಯವಹಾರ ನಡೆದಿದೆ ಅನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಂಬಗಳನ್ನು ಸರಿಯಾಗಿ ಹಾಕಿಲ್ಲ, ವಯರ್‌ಗಳನ್ನು ಸಮರ್ಪಕವಾಗಿ ಅಳವಡಿಸಿಲ್ಲ. ದೊಡ್ಡ ಅವ್ಯವಹಾರವಾಗಿದೆ ಎಂದು ಆರೋಪಿಸಿದರು.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಇಷ್ಟು ದೊಡ್ಡ ಅವ್ಯವಹಾರದಲ್ಲಿ ಜೆಇ, ಎಇ ಅಮಾನತು ಮಾಡಲಾಗಿದೆ. ಆದರೆ ಇಷ್ಟು ದೊಡ್ಡ ಹಗರಣವನ್ನು ಇವರಿಬ್ಬರೆ ಮಾಡಲಾಗುತ್ತದೆಯೆ. ಸುಮಾರು 40 ಅಧಿಕಾರಿಗಳು ಈ ಯೋಜನೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡುವ ಪ್ರಯತ್ನವಾಯಿತಾ? ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಗೃಹ ಸಚಿವರನ್ನು ಒತ್ತಾಯಿಸುತ್ತೇನೆ ಎಂದರು.

ಸ್ಮಾರ್ಟ್ ಸಿಟಿ ಯೋಜನೆ

ಇದರಲ್ಲಿ ಮಾಡಲ್ ಸಬ್ ಡಿವಿಷನ್‌ಗೆ 30 ಕೋಟಿ ರೂ., IPDSಗೆ 75 ಕೋಟಿ ರೂ. ನೀಡಲಾಗಿದೆ. ಯು.ಜಿ ಕೇಬಲ್ ಅಳವಡಿಕೆ ಯೋಜನೆ ಇದು. ಇದರಲ್ಲೂ ದೊಡ್ಡ ಪ್ರಮಾಣದ ಅವ್ಯವಹಾರವಾಗಿದೆ. ಇನ್ನಷ್ಟು ದಾಖಲೆ ಸಂಗ್ರಹ ಮಾಡಲಾಗುತ್ತಿದೆ ಎಂದರು.

AVvXsEiMo7qChOxYrMbQNoFtSumAZgDM

‘ಜಿಲ್ಲಾ ಮಂತ್ರಿಗಳ ವೈಫಲ್ಯ’

ದೇವಕಾತಿಕೊಪ್ಪದಲ್ಲಿ ವಿದ್ಯುತ್ ಪೂರೈಕೆಗೆ ಸಬ್‌ಸ್ಟೇಷನ್ ಸ್ಥಾಪನೆ ಮಾಡುವ ಯೋಜನೆ ಇತ್ತು. 10 ಕೋಟಿ ರೂ. ವೆಚ್ಚದಲ್ಲಿ ಮಾಡಬಹುದಾದ ಯೋಜನೆಗೆ 15 ಕೋಟಿ ರೂ. ವೆಚ್ಚ ಮಾಡಲಾಗಿದೆ. ದೇವಕಾತಿಕೊಪ್ಪದಲ್ಲಿ ಸಬ್ ಸ್ಟೇಷನ್ ಮಾಡುವ ಬದಲು ಆಲ್ಕೊಳದಿಂದ ಯು.ಜಿ.ಕೇಬಲ್ ಮೂಲಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈಗ ಜಿಲ್ಲಾಧಿಕಾರಿ ಅವರು ಸಭೆಯಲ್ಲಿ ಮಾತನಾಡಿ, ಅಗತ್ಯ ಬಿದ್ದರೆ ಸಬ್‌ಸ್ಟೇಷನ್ ಸ್ಥಾಪನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಈಗ 15 ಕೋಟಿ ರೂ. ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಇದು ಜಿಲ್ಲಾ ಸಚಿವರ ವೈಫಲ್ಯಕ್ಕೆ ಸಾಕ್ಷಿ ಎಂದು ಪ್ರಸನ್ನ ಕುಮಾರ್ ಆರೋಪಿಸಿದರು.

ABOUT ME DECEMBER REPORT

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 040122 DS Arun Samvadha in Shimoga Press Trust ‘ಶಿವಮೊಗ್ಗದಲ್ಲಿ ಡಿಜಿಟಲ್ ಗ್ರಾಮಗಳು, ಹಳ್ಳಿ ಹಳ್ಳಿಗೆ ಪ್ರಶ್ನಾವಳಿ ಜೊತೆ ಪ್ರವಾಸ’, ನೂತನ ಎಂಎಲ್‌ಸಿ ಅರುಣ್ ಸಂವಾದ | 10 POINT NEWS
Next Article 040121 NSUI protest in Shimoga favour of guest lecturers ಅತಿಥಿ ಉಪನ್ಯಾಸಕರ ಪರವಾಗಿ ಬೀದಿಗಿಳಿದ ವಿದ್ಯಾರ್ಥಿಗಳು, ಸರ್ಕಾರದ ವಿರುದ್ಧ ಆಕ್ರೋಶ

ಇದನ್ನೂ ಓದಿ

Shimoga-Jds-leaders-meet-Central-Minister-Kumaraswamy-VISL
Uncategorized

ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
Vidyanagara-Smart-city-board
Uncategorized

ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
RESULT-THUMBNAIL1
POLITICSUncategorized

ಶಿವಮೊಗ್ಗ ಫಲಿತಾಂಶ LIVE | ಎರಡು ಲಕ್ಷ ದಾಟಿದ ಅಂತರ, ಈತನಕ ರಾಘವೇಂದ್ರ ಪಡೆದ ಮತಗಳೆಷ್ಟು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 21 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/05/2024
Shohib-aliya-anda-arrested-by-police-near-beeranakere
Uncategorized

ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?