SHIVAMOGGA LIVE NEWS | 7 DECEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
HOSANAGARA : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರು ಶ್ರೀಗಂಧ (Sandalwood) ಕಳ್ಳರನ್ನು ಬಂಧಿಸಿದ್ದಾರೆ. ನಗರ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಆರ್ಎಫ್ಓ ಸಂಜಯ್ ಮಾರ್ಗದರ್ಶನಲ್ಲಿ ದಾಳಿ ನಡೆಸಲಾಗಿದೆ.
ನಿವಣೆ ಪರಮೇಶ್ವರ, ಮಾನಿ ಗ್ರಾಮದ ಎಂ.ಕೆ.ಹರೀಶ್, ನಾಗರಕೊಡಿಗೆ ಚಿದಾನಂದ, ಅರುಣ್ಕುಮಾರ್ ಬಂಧಿತರು. ಹೊಸನಗರ ತಾಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿತಲೆ ಮಾಡಿ ಸಾಗಣೆಗೆ ಯತ್ನಿಸಿದ್ದರು.
ಇದನ್ನೂ ಓದಿ- ಮುಷ್ಕರ ಮುಗಿಸಿ ಮನೆಗೆ ಮರಳಿದ ಅಂಗನವಾಡಿ ಕಾರ್ಯಕರ್ತೆಗೆ ಕಾದಿತ್ತು ಶಾಕ್
ಕೃತ್ಯಕ್ಕೆ ಬಳಸಿದ್ದ ಒಂದು ಮೋಟಾರ್ ಸೈಕಲ್ ವಶಕ್ಕೆ ಪಡೆಯಲಾಗಿದೆ. ಸೊನಲೆ ಡಿಆರ್ಎಫ್ಒ ನರೇಂದ್ರ, ಯಡೂರು ಪ್ರವೀಣ್, ನಗರ ಅಮೃತ್ ಸುಂಕದ್, ನಿಟ್ಟೂರು ಸತೀಶ್, ಕಸಬಾ ಯುವರಾಜ್, ಹಾಲೇಶ್, ಬೀಟ್ ಫಾರೆಸ್ಟರ್ಗಳಾದ ಮನೋಜ್, ಮನೋಜ್ ಕುಮಾರ್, ಯೋಗೀಶ್, ಶಶಿಕುಮಾರ್, ಜೆಸ್ಸಿ, ಸುಮಾ, ಚಾಲಕ ರಾಮು ಗಾಣಿಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






